26
August, 2026

A News 365Times Venture

26
Wednesday
August, 2026

A News 365Times Venture

ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್​ಸಿ ಸಂಬಂಧಿ

Date:

ಚಿಕ್ಕಬಳ್ಳಾಪುರ, ಏಪ್ರಿಲ್ ,23,2025 (www.justkannada.in):  ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ  ಸಂಬಂಧಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲು ಕ್ವಾರಿ ಕ್ರಷರ್ ​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟಿಸುತ್ತಿದ್ದವರ ಮೇಲೆ  ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಿಂದ ಗಾಯಗೊಂಡ ರವಿ ಎಂಬುವವರನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Former MLC,  relative, fires, protesters

The post ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್​ಸಿ ಸಂಬಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...