16
July, 2025

A News 365Times Venture

16
Wednesday
July, 2025

A News 365Times Venture

ಫೆ.1 ಮತ್ತು 2 ರಂದು ಪರಿದೃಶ್ಯ ಚಿತ್ರೋತ್ಸವ: ಪೋಸ್ಟರ್ ಬಿಡುಗಡೆ

Date:

ಮೈಸೂರು,ಜನವರಿ,27,2025 (www.justkannada.in): ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ ಫೆಬ್ರವರಿ 1ಮತ್ತು 2ರಂದು ಪರಿದೃಶ್ಯ ಚಿತ್ರೋತ್ಸವ ಕಾರ್ಯಕ್ರಮವನ್ನಆಯೋಜಿಸಲಾಗಿದೆ.

ನಗರದ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ನಟ, ನಿರ್ದೇಶಕ  ಪ್ರಕಾಶ್ ಬೆಳವಾಡಿ, ಬರಹಗಾರ ಮನೇಕ್ ಪ್ರೇಮಚಂದ್ ಮತ್ತು  ಕೆಎಸ್ ಒಯು ಕುಲಪತಿ ಶರಣಪ್ಪ ಹಲಸೆ ಉದ್ಘಾಟಿಸಲಿದ್ದಾರೆ.  ಪೃಥ್ವಿ ಕೊಣನೂರ್, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀ ವತ್ಸ,ಹಾಗೂ ಇನ್ನಿತರ ಶಾಸಕರು ಉಪಸ್ಥಿತರಿರಲಿದ್ದಾರೆ.

ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ. ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಭಾರತದಿಂದ 985, ಇರಾನ್, 42,  ಫ್ರಾನ್ಸ್ 138, ಇಟಲಿ 5, ಜರ್ಮನಿ 137, ರಷ್ಯಾದಿಂದ 108 ಸೇರಿ 3123 ಸಿನಿಮಾಗಳು ಬಂದಿವೆ.  ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸಚಿವ ಡಾ.ಎಲ್ ಮುರುಗನ್ ಅವರು ಉಪಸ್ಥಿತರಿರಲಿದ್ದಾರೆ. ಈ ಕುರಿತ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಮೈಸೂರು ಸಿನಿಮಾ ಸೊಸೈಟಿ ಕಾರ್ಯದರ್ಶಿ ಪದ್ಮವಾತಿ ಭಟ್, ಸಂಯೋಜಕ ಚೇತನ ಜಿ.ಅರ್,  ಸದಸ್ಯರುಗಳಾದ ಜೋಗಿ ಮಂಜು, ಸೀಮಾ ಬುರುಡೆ, ವೇಣುಗೋಪಾಲ್ ಇದ್ದರು.

Key words: Paridrishya Film Festival, mysore, Feb 1, Poster, release

The post ಫೆ.1 ಮತ್ತು 2 ರಂದು ಪರಿದೃಶ್ಯ ಚಿತ್ರೋತ್ಸವ: ಪೋಸ್ಟರ್ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...