13
July, 2025

A News 365Times Venture

13
Sunday
July, 2025

A News 365Times Venture

ಬಾಬು ಜಗಜೀವನ್ ರಾಮ್ ಅವರಿಗೆ ಅಗೌರವ ಆರೋಪ : ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಮುಖಂಡರು

Date:

ಮೈಸೂರು,ಏಪ್ರಿಲ್,6,2025 (www.justkannada.in):  ಬಾಬು ಜಗಜೀವನರಾಮ್ ಅವರಿಗೆ ಅಗೌರವ ತೋರಿದ್ದಾರೆಂದು ಆರೋಪಿಸಿ ಮುಖಂಡರು ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.

ಹೆಚ್.ಡಿ ಕೋಟೆ ತಾಲೂಕು ಆಡಳಿತದ ವತಿಯಿಂದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿದ್ದರು. ನಂತರ ಭಾಷಣದ ಬಳಿಕ ಮತ್ತೂಂದು ಕಾರ್ಯಕ್ರಮ ನಿಮಿತ್ತ  ಶಾಸಕ ಅನಿಲ್ ಚಿಕ್ಕಮಾದು ಕಾರ್ಯಕ್ರಮದಿಂದ ಹೊರ ನಡೆದರು.

ಕಾರ್ಯಕ್ರಮ ಮುಗಿಯದಿದ್ದರೂ ಶಾಸಕರ ಹಿಂದೆಯೇ ಬಹುಪಾಲು ಅಧಿಕಾರಿಗಳು ಹೊರ ನಡೆದರು. ಅಧಿಕಾರಿಗಳ ಈ ನಡೆಯಿಂದ ಬೇಸರಗೊಂಡ ಅಲ್ಲಿನ ಮುಖಂಡರು ತಹಶಿಲ್ದಾರ್ ಗೆ ತರಾಟೆ ತೆಗೆದುಕೊಂಡರು. , ಅಧಿಕಾರಿಗಳ ಬೇಜವಾಬ್ದಾರಿ ಕಂಡು ರಾಷ್ಟ್ರನಾಯಕನಿಗೆ ಅಗೌರವ ತೋರಿದ್ದಾರೆ ಎಂದು  ಆಕ್ರೊಶ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರನಡೆದ ಘಟನೆ ನಡೆಯಿತು.

ಸ್ಥಳದಲ್ಲಿದ್ದ ಕೆಲವೆ ಅಧಿಕಾರಿಗಳು ಮತ್ತು ಬೆರಳೆಣಿಕೆಯಷ್ಟು ಮುಖಂಡರೊಡನೆ ತಹಶೀಲ್ದಾರ್ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

Key words: Babu Jagjivan Ram, disrespectful, boycotted, program

The post ಬಾಬು ಜಗಜೀವನ್ ರಾಮ್ ಅವರಿಗೆ ಅಗೌರವ ಆರೋಪ : ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಮುಖಂಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...