12
December, 2025

A News 365Times Venture

12
Friday
December, 2025

A News 365Times Venture

ಬಾಲರಾಮನ ಶಿಲೆ ಸಿಕ್ಕ ಸ್ಥಳದ ವಿವಾದ: ‘ದಕ್ಷಿಣ ಬುದ್ದಗಯ’ ನಿರ್ಮಾಣಕ್ಕೆ ಮುಂದಾದ ಪ್ರಗತಿಪರ ಚಿಂತಕರು

Date:

ಮೈಸೂರು,ಜೂನ್,10,2025 (www.justkannada.in):  ಬಾಲ ರಾಮನ ಶಿಲೆ ಸಿಕ್ಕ ಸ್ಥಳದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರು ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಬಾಲರಾಮನ ಶಿಲೆ ಸಿಕ್ಕ ಸ್ಥಳದಲ್ಲಿ ದಕ್ಷಿಣದ ಅಯೋಧ್ಯೆ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದ ಪ್ರಗತಿಪರ ಚಿಂತಕರು ಇದೀಗ ದಕ್ಷಿಣದ ಬುದ್ದಗಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಹಾರೋಹಳ್ಳಿಯಲ್ಲಿ ಬಾಲರಾಮನ ಶಿಲೆ ಸಿಕ್ಕ ಸ್ಥಳದಲ್ಲಿ ಇತ್ತೀಚಿಗೆ ದಕ್ಷಿಣ ಅಯೋಧ್ಯೆ ಮಾಡುತ್ತೇವೆ ಎಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆಗೆ ಹೋಗಿದ್ದವರಿಗೆ ಕೆಲ ಪ್ರಗತಿಪರ ಚಿಂತಕರು ಅಡ್ಡಿ ಮಾಡಿ ಗಲಾಟೆ ಮಾಡಿ ವಾಪಸ್ ಕಳುಹಿಸಿದ್ದರು. ಇದೀಗ ಕೆಲ ಪ್ರಗತಿಪರ ಚಿಂತಕರು ದಕ್ಷಿಣ ಅಯೋಧ್ಯೆ ಬದಲು ದಕ್ಷಿಣ ಬುದ್ದಗಯಕ್ಕೆ ಚಿಂತನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬುದ್ದ ಪೂರ್ಣಿಮಾ ಅಂಗವಾಗಿ ಬೋದಿ ವೃಕ್ಷ ನೆಟ್ಟು ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿದ್ದಾರೆ. ಬುದ್ದಗಯಕ್ಕೆ ಈಗಾಗಲೇ ಜಮೀನಿನ ಮಾಲೀಕ ರಾಮದಾಸ್ ರಿಂದ ಬುದ್ಧಗಯ ಸ್ಮಾರಕ ನಿರ್ಮಾಣ ಸಮಿತಿ ಒಪ್ಪಿಗೆ ಪಡೆದಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪ್ರಗತಿಪರ ಚಿಂತಕರು ಭಾಗಿಯಾಗಲಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಮೇಯರ್ ಪುರುಷೋತ್ತಮ್, ನಾಳಿನ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ ದೇವೇಗೌಡ ಕೂಡ ಭಾಗಿಯಾಗಲಿದ್ದಾರೆ. ಉತ್ತರ ಭಾರತ ಅಯೋಧ್ಯೆಯಿಂದ ಜಾತಿ, ಧರ್ಮದ ಬಗ್ಗೆ ವೈಷಮ್ಯ ಹೆಚ್ಚಾಗುತ್ತಿದೆ. ನಮಗೆ ಶಾಂತಿ ಬೇಕು ಅಶಾಂತಿ ಹುಟ್ಟುಹಾಕುವ ರಾಮ ಮಂದಿರ ಬೇಡ. ನಮಗೆ ಬುದ್ದನ ಚಿಂತನೆಗಳು ಬೇಕು. ಇಡೀ ವಿಶ್ವಕ್ಕೆ ಬುದ್ದನ ಚಿಂತನೆಗಳು ಮಾದರಿಯಾಗಿವೆ. ಹಾಗಾಗಿ ನಾವು ನಾಳೆ ದಕ್ಷಿಣ ಬುದ್ದ ಗಯಕ್ಕೆ ಶಂಕುಸ್ಥಾಪನೆ ಮಾಡುವ ಮೂಲಕ ಜನ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಸಮಾವೇಶಕ್ಕೆ ಜಾತ್ಯಾತೀತವಾಗಿ ಪ್ರಗತಿಪರ ಚಿಂತಕರು, ಸಾಹಿತಿಗಳು ಭಾಗವಹಿಸಲಿದ್ದಾರೆ. ಅಲ್ಲಿ ಬುದ್ದನ ಜ್ಞಾನ ಕೇಂದ್ರ, ಮಂದಿರ ನಿರ್ಮಾಣ ಮಾಡೇ ಮಾಡುತ್ತೇವೆ ಎಂದು ಮಾಜಿ ಮೇಯರ್ ಪುರುಷೋತ್ತಮ್  ತಿಳಿಸಿದ್ದಾರೆ.vtu

Key words: Controversy, Bala Rama, Mysore, thinkers, South Bodhgaya

The post ಬಾಲರಾಮನ ಶಿಲೆ ಸಿಕ್ಕ ಸ್ಥಳದ ವಿವಾದ: ‘ದಕ್ಷಿಣ ಬುದ್ದಗಯ’ ನಿರ್ಮಾಣಕ್ಕೆ ಮುಂದಾದ ಪ್ರಗತಿಪರ ಚಿಂತಕರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...