8
July, 2025

A News 365Times Venture

8
Tuesday
July, 2025

A News 365Times Venture

ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ

Date:

ಬೆಂಗಳೂರು,ಜನವರಿ,25,2025 (www.justkannada.in): ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ನನ್ನು  ಕೂಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಸಹಕಾರ ನಗರದ ಮನೆ ಬಳಿ ನಡೆದ ಗಲಾಟೆ ಸಂಬಂಧ ತೇಜಸ್ ಎಂಬುವವರು ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು.  ಈ ಮಧ್ಯೆ  ಪೊಲೀಸರು ಲಾಯರ್  ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ  ಕಾನೂನು ಬಾಹಿರವಾಗಿ ಫೈರ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಳಸಲು ಮಾತ್ರ ಗನ್  ಲೈಸೆನ್ಸ್ ಪಡೆದಿದ್ದರು. ಆದರೆ ಗಲಾಟೆ ವೇಳೆ ಬಳಕೆ ಕಾನೂನು ಬಾಹಿರವಾಗಿ ಫೈರ್  ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Key words: Bigg Boss, former contestant, lawyer, Jagadish, arrested

 

The post ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...