16
July, 2025

A News 365Times Venture

16
Wednesday
July, 2025

A News 365Times Venture

ಬಿಸಿಯೂಟ: ಗೊಂದಲಕ್ಕೆ ಎಡೆಮಾಡಿದ ಸರಕಾರದ ಆದೇಶ..!

Date:

ಬೆಂಗಳೂರು,ಮಾರ್ಚ್,28,2025 (www.justkannada.in): ಶಾಲೆಗಳಲ್ಲಿ ಕೆಲವು ದಿನಗಳಲ್ಲಿ ಬೇಸಿಗೆ ರಜೆಯ ಪ್ರಾರಂಭವಾಗಲಿದ್ದು ಈ ಮಧ್ಯೆ ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶವೊಂದನ್ನ ಹೊರಡಿಸಿದ್ದು  ಈ ಆದೇಶ ಇದೀಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಹೌದು, ಶಾಲೆಗಳಲ್ಲಿ ಬಿಸಿಯೂಟ ಮಾಡುವ ಅಡುಗೆ ತಯಾರಕರು,  ಸಹಾಯಕರನ್ನ ಮಾರ್ಚ್ 31ಕ್ಕೆ  ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಏಪ್ರಿಲ್ 10ರವರೆಗೂ ಶಾಲೆಗಳನ್ನ ನಡೆಸಬೇಕು. ಮಕ್ಕಳಿಗೆ  ಬಿಸಿಯೂಟ ಮೊಟ್ಟೆ ಹಾಲು  ಕೊಡಬೇಕು  ಎಂದು ಸರ್ಕಾರ ಸೂಚಿಸಿದೆ. ಈ ನಡುವೆ ಬಿಸಿಯೂಟ ಅಡುಗೆ ತಯಾರಕರು,  ಸಹಾಯಕರನ್ನ ಮಾರ್ಚ್ 31ಕ್ಕೆ ಬಿಡುಗಡೆಗೊಳಿದರೇ ಏಪ್ರಿಲ್ 10ರವರೆಗೂ  ಮಕ್ಕಳಿಗೆ ಬಿಸಿಯೂಟ  ಯಾರು ತಯಾರು ಮಾಡುತ್ತಾರೆ ಎಂಬ ಪ್ರಶ್ನೆ ಉದ್ಬವಿಸಿದೆ.

ಅಡುಗೆ ತಯಾರಕರು ಸಹಾಯಕರನ್ನ ಬಿಡುಗಡೆ ಮಾಡಲು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, 2024-25 ನೇ ಸಾಲಿನ ಪಿಎಂ ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-204 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿದೆ.

2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ದಿನಾಂಕ: 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆದರೆ ಶಾಲೆಗಳು ಏಪ್ರಿಲ್ 10ರವರೆಗೂ ತೆರೆದಿರುತ್ತವೆ. ಜೊತೆಗೆ ಮಕ್ಕಳಿಗೆ ಬಿಸಿಯೂಟ ಮೊಟ್ಟೆ ಹಾಲು ವಿತರಿಸಬೇಕೆಂದು ಸರ್ಕಾರ ಆದೇಶಿಸಿದೆ. ಆದರೆ ಇದೀಗ ಮಾರ್ಚ್ 31ಕ್ಕೆ ಬಿಸಿಯೂಟ ಅಡುಗೆ ತಯಾರಕರು,  ಸಹಾಯಕರನ್ನ ಬಿಡುಗಡೆಗೊಳಿಸುವಂತೆ ಸರ್ಕಾರ ಹೊರಡಿಸಿರುವ ಆದೇಶ ಸಾಕಷ್ಟು ಗೊಂದಲವನ್ನುಂಟು ಮಾಡಿದೆ.

Key words: School, bisiyuta, Government order, confusion

The post ಬಿಸಿಯೂಟ: ಗೊಂದಲಕ್ಕೆ ಎಡೆಮಾಡಿದ ಸರಕಾರದ ಆದೇಶ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...