ಬೆಂಗಳೂರು,ಜುಲೈ,3,2026 (www.justkannada.in): ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನ ಸಂಜಯ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗಾಜಿಯಾಬಾದ್ ನ ನಿಶಾಂತ್ ತ್ಯಾಗಿ(36) ಬಂಧಿತ ಆರೋಪಿ. ಈತ ಬೆಂಗಳೂರಿನ ಇಸ್ರೋ ಕಚೇರಿಗೆ ಬಾಂಬೆ ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದನು. ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ನಿಶಾಂತ್ ತ್ಯಾಗಿಯನ್ನ ಹೆಡೆಮುರಿ ಕಟ್ಟಿದ್ದಾರೆ.
ಉತ್ತರ ಪ್ರದೇಶದಿಂದ ಹುಸಿ ಬೆದರಿಕೆ ಬಂದಿತ್ತು. ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಮೊಬೈಲ್ ಪರಿಶೀಲನೆ ವೇಳೆ ಇ-ಮೇಲ್ ಮಾಡಿದ್ದು ದೃಢವಾಗಿದೆ. ಬಂಧಿತ ಆರೋಪಿಯನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸರ ಜೊತೆ ವಿಚಾರಣೆ ನಡೆಸಲಾಗುತ್ತಿದೆ.
Key words: arrest, accused, bomb threat, ISRO office, Bengaluru
The post ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




