30
July, 2026

A News 365Times Venture

30
Thursday
July, 2026

A News 365Times Venture

ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Date:

ಬೆಳಗಾವಿ, ಜುಲೈ, 28,2026 (www.justkannada.in): ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಯಾವುದೇ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಸಾರ್ವಜನಿಕ ಶೌಚಾಲಯಗಳು ದಿನದ ಎಲ್ಲ ಸಮಯದಲ್ಲೂ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಅವುಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ನಿರ್ವಹಣೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರದ ಕನ್ನಡ ಪರ ನಿಲುವಿಗೆ ಅನುಗುಣವಾಗಿ, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕನ್ನಡ ನಾಮಫಲಕಗಳ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಉಲ್ಲಂಘನೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಗರದಲ್ಲಿ ಬಾಕಿ ಉಳಿದಿರುವ ಹಳೆಯ ಘನತ್ಯಾಜ್ಯ (Legacy Waste) ನಿರ್ವಹಣೆಯನ್ನು ತ್ವರಿತಗೊಳಿಸಿ ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಹಾಳಾಗಿರುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಬೆಳಗಾವಿಯನ್ನು ಮಾದರಿ ನಗರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ರಾಜ ಶೇಠಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಅಧ್ಯಕ್ಷ ಲಕ್ಷ್ಮಣ ರಾವ್ ಜಿಂಗಳೆ, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಪ್ರೀತಿ ಕಾಮ್ಕರ್, ಉಪ ಮಹಾಪೌರ ಹಣಮಂತ ಕೊಂಗಾಲಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಕವಿತಾ ವಾರಂಗಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶಕೀಲ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words:  development works, Belgaum city, Minister, Dr. Yathindra Siddaramaiah

The post ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭುಗಿಲೆದ್ದ ಕಾವೇರಿ ಕಿಚ್ಚು: ಇಂದು CWMA ಸಭೆ :ರಾಜ್ಯಕ್ಕೆ ಸಿಗುತ್ತಾ ಗುಡ್ ನ್ಯೂಸ್?

ಬೆಂಗಳೂರು,ಜುಲೈ,30,2026 (www.justkannada.in): ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) 15 ದಿನಗಳವರೆಗೆ...

ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ- ಜಲಮಂಡಳಿ ಅಧ್ಯಕ್ಷೆ ಮಂಜುಳ

ಬೆಂಗಳೂರು,ಜುಲೈ,30,2026 (www.justkannada.in):  ಸರಿಯಾಗಿ ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ ಎದುರಾಗಲಿದೆ...

ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದು

ಮೈಸೂರು,ಜುಲೈ,30,2026 (www.justkannada.in): ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರ...

ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.

ಮೈಸೂರು, ಜುಲೈ, 28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್...