21
April, 2026

A News 365Times Venture

21
Tuesday
April, 2026

A News 365Times Venture

ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

Date:

ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ. ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾತಿಯಲ್ಲಿ ಅವರು ರಾಜಕೀಯ ಮಾಡ್ತಿದ್ದಾರೆ. 2023 ರಲ್ಲಿ ಯಾಕೆ ಜಾರಿ ಮಾಡಲಿಲ್ಲ. ಈಗ ಭ್ರೂಣ ಹತ್ಯೆ ಅಂತ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ. ಇದ್ದಿದ್ದರೆ ಬಹಳ ಹಿಂದೆನೇ ಮಹಿಳಾ ಮೀಸಲಾತಿ ಜಾರಿ ಮಾಡುತ್ತಿದ್ದರು. 2023  ಪ್ರಕಾರ ಮೀಸಲಾತಿ ಜಾರಿ ಮಾಡಿ ಅಂತ ನಮ್ಮ ತಕರಾರು. ಡಿಲಿಮಿಟೇಷನ್ ಮಾತ್ರ ಹೊಸದಾಗಿ ಮಾಡಿ ಅಂತ ಕೇಳುತ್ತಿದ್ದೇವೆ. ಯುಪಿ 126 ಕರ್ನಾಟಕ 46 ನಮಗಿಂತ ಜಾಸ್ತಿ ಆಗತ್ತದೆ. ಹೀಗಾಗಿ ಸೆನ್ಸಸ್ ಮಾಡಿ ಸಮಾನವಾಗಿ ಹಂಚಬೇಕು. ಇದು ನಮ್ಮ ಉದ್ದೇಶ. ದಕ್ಷಿಣ ಭಾರತದಲ್ಲಿ ಪಾಪ್ಯುಲೇಷನ್ ಕಂಟ್ರೋಲ್ ಮಾಡಿದ್ದೇವೆ. ಉತ್ತರ ಪ್ರದೇಶದ ಕಡೆ ಮಾಡಿಲ್ಲ. ಇದು ಸಮಸ್ಯೆಯಾಗಿ ನಮಗೆ ತೊಂದರೆಯಾಗುತ್ತದೆ ಎಂದರು.

ಮಹಿಳಾ ಮೀಸಲಾತಿಯಲ್ಲಿ  ಮೋದಿ ರಾಜಕೀಯ ಮಾಡ್ತಿದ್ದಾರೆ. 2/3 ಮೆಜಾರಿಟಿ ಇಲ್ಲ ಅಂದರೂ ಬಿಲ್ ತಂದ್ದರು ಎಂದು ಕಿಡಿಕಾರಿದರು.

ನಾನು ಮೋದಿ ಇಬ್ಬರು ಗುಟ್ಟಾಗಿ ಏನು ಮಾತನಾಡಿಲ್ಲ

ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಪಿಎಂ – ಸಿಎಂ ಗುಟ್ಟಾಗಿ ಚರ್ಚೆ ನಡೆಸಿದ್ದಾರೆಂಬ ಫೋಟೋ  ವೈರಲ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಮೋದಿ ಇಬ್ಬರು ಗುಟ್ಟಾಗಿ ಏನು ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತ ಕೇಳಿದ್ದರು. ನಾನು ಮಹಿಳಾ ಮೀಸಲಾತಿ  ಪರವಾಗಿದ್ದೇನೆ ಅಂತ ಹೇಳಿದ್ದೇನೆ ಅಷ್ಟೇ. ಅದರಲ್ಲಿ ಬೇರೇನಿಲ್ಲ ಎಂದು ಸ್ಪಷ್ಟಪಡಿಸಿದರು.

ತಮಿಳುನಾಡಿನ ಪ್ರಚಾರಕ್ಕೆ ನಾನು ಹೋಗಿಲ್ಲ

ಇನ್ನು ತಮಿಳುನಾಡಿನ ಪ್ರಚಾರಕ್ಕೆ ನಾನು ಹೋಗಿಲ್ಲ. ನನಗಿರುವ ಮಾಹಿತಿ ಪ್ರಕಾರ ಡಿಎಂಕೆ ಗೆಲ್ಲುತ್ತದೆ. ಕೇರಳ ನಾವು ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಭಾರತದಲ್ಲಿ ಬಿಜೆಪಿ ಗ್ಯಾರಂಟಿ ಕಾಪಿ ಮಾಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿಗಳನ್ನು ಬಿಜೆಪಿ ವಿರೋಧ ಮಾಡಿತ್ತು. ಮೋದಿ ಕೂಡ ವಿರೋಧ ಮಾಡಿದ್ದರು. ರಾಜ್ಯ ಆರ್ಥಿಕ ದಿವಾಳಿ ಆಗತ್ತೆ ಅಂದಿದ್ದರು. ಇದೀಗ ನಮ್ಮ ಗ್ಯಾರಂಟಿ ಕಾಪಿ ಮಾಡುತ್ತಿದ್ದಾರೆ. ಇದರಿಂದ ಅವರ ಡಬಲ್ ಸ್ಟ್ಯಾಂಡ್ ಗೊತ್ತಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಮಾಹಿತಿ ಇಲ್ಲ ಎಂದರು.

Key words: Politics,  women’s reservation, PM, Modi, CM, Siddaramaiah

The post ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ...

ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಏಪ್ರಿಲ್,20,2026 (www.justkannada.in):  ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ ದೇಶಗಳಲ್ಲಿ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್...