20
July, 2025

A News 365Times Venture

20
Sunday
July, 2025

A News 365Times Venture

ಮಾ.31ರಿಂದ 15 ವರ್ಷದ ಹಳೆಯ ವಾಹನಗಳಿಗೆ ಪೆಟ್ರೋಲ್ ಡೀಸೆಲ್ ಹಾಕಲ್ಲ

Date:

ನವದೆಹಲಿ,ಮಾರ್ಚ್,1,2025 (www.justkannada.in): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ  ಹೆಚ್ಚುತ್ತಿರುವ ಮಾಲಿನ್ಯವನ್ನು ನಿಭಾಯಿಸಲು ದೆಹಲಿ ಸರ್ಕಾರ  ಮಹತ್ವದ ನಿರ್ಧಾರವನ್ನು  ಕೈಗೊಂಡಿದೆ.

ಮಾರ್ಚ್ 31ರಿಂದ 15 ವರ್ಷದ ಹಳೆಯ ವಾಹನಗಳಿಗೆ ಪೆಟ್ರೋಲ್ ಡೀಸೆಲ್ ಹಾಕದರಿಲು ನಿರ್ಧರಿಸಿದೆ.  ದೆಹಲಿಯ ಪರಿಸರ ಇಲಾಖೆ ಈ ಬಗ್ಗೆ ತೀರ್ಮಾನಿಸಿದ್ದು, ಇದೇ ಮಾರ್ಚ್ 31ರಿಂದ ಹೊಸ ನಿಯಮ ಜಾರಿಗೆ ಬರಲಿದೆ.

ಈ ಕುರಿತು ಮಾತನಾಡಿರುವ ದೆಹಲಿ ಪರಿಸರ ಇಲಾಖೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ,   ಮಾರ್ಚ್ 31ರ ನಂತರ ದೆಹಲಿಯ ಯಾವುದೇ ಪೆಟ್ರೋಲ್ ಪಂಪ್‌ ನಲ್ಲಿ 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳಿಗೆ ಪೆಟ್ರೋಲ್ ನೀಡುವುದಿಲ್ಲ. ವಾಹನಗಳ ಹೊಗೆ ಮತ್ತು ಮಾಲಿನ್ಯವನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ .

ದೆಹಲಿ ಸರ್ಕಾರ ಹಳೆಯ ವಾಹನಗಳನ್ನು ಗುರುತಿಸಲು ಸ್ಮಾರ್ಟ್ ಗ್ಯಾಜೆಟ್‌ ಗಳನ್ನು ಬಳಸಲು ನಿರ್ಧರಿಸಿದೆ. ಈ ಗ್ಯಾಜೆಟ್‌ ಗಳ ಸಹಾಯದಿಂದ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಪೆಟ್ರೋಲ್ ಪಂಪ್‌ ಗಳಲ್ಲಿ ಗುರುತಿಸಲಾಗುತ್ತದೆ ಮತ್ತು ಅವುಗಳಿಗೆ ಇಂಧನ ನೀಡಲಾಗುವುದಿಲ್ಲ. ಇಡೀ ಪ್ರಕ್ರಿಯೆಯನ್ನು ಸುಗಮವಾಗಿ ಕಾರ್ಯಗತಗೊಳಿಸಲು ಈ ನಿರ್ಧಾರದ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಸಿರ್ಸಾ  ತಿಳಿಸಿದ್ದಾರೆ.

Key words: Petrol, diesel,  not, 15 years, old vehicles

The post ಮಾ.31ರಿಂದ 15 ವರ್ಷದ ಹಳೆಯ ವಾಹನಗಳಿಗೆ ಪೆಟ್ರೋಲ್ ಡೀಸೆಲ್ ಹಾಕಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...