ಮಂಡ್ಯ,ಆಗಸ್ಟ್,3,2026 (www.justkannada.in): ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124 ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಕೆಆರ್ ಎಸ್ ಜಲಾಶಯ ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ.
ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು ಸದ್ಯ ಕೆಆರ್ ಎಸ್ ಡ್ಯಾಂಗೆ 32,048 ಕ್ಯೂಸೆಕ್ ನೀರು ಒಳಹರಿವು ಇದೆ. ಇದೇ ರೀತಿ ಮಳೆಯಾದರೇ ಕೆಆರ್ ಎಸ್ ಜಲಾಶಯ ಭರ್ತಯಾಗಲಿದ್ದು ರೈತರು ಮುಖದಲ್ಲಿ ಮಂದಹಾಸ ಮೂಡಿದೆ.
ಇತ್ತೀಚೆಗೆ ತಮಿಳುನಾಡಿಗೆ 3500 ಕ್ಯೂಸೆಕ್ ಪ್ರತಿನಿತ್ಯ 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿತ್ತು.
Key words: Rains, KRS reservoir, filled , 100 feet
The post ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




