10
March, 2026

A News 365Times Venture

10
Tuesday
March, 2026

A News 365Times Venture

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್: ಹರಕೆ ತೀರಿಸಲು ಮುಂದಾದ್ರಾ ಸಚಿವರು

Date:

ಮೈಸೂರು,ಫೆಬ್ರವರಿ,21,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್  ಹರಕೆ ತೀರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮೈಸೂರಿನ ಚಾಮುಂಡಿಬೆಟ್ಟ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಭೇಟಿ ನೀಡುತ್ತಿದ್ದು,  ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಹಿನ್ನೆಲೆ ಸಚಿವ ಭೈರತಿ ಸುರೇಶ್ ಹರಕೆ ಕಟ್ಟಿಕೊಂಡಿದ್ದಾರೆಯೇ ಎನ್ನಲಾಗಿತ್ತು.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಪ್ರಕರಣದಲ್ಲಿ ಸಿಲುಕಿದ್ದರು. ಹೀಗಾಗಿ ಮೊದಲ ದಿನದಿಂದಲೂ ಸಚಿವ ಭೈರತಿ ಸುರೇಶ್ ಮೇಲೆ ಹಲವರು ಬೊಟ್ಟು ಮಾಡಿದ್ದರು. ಭೈರತಿ ಸುರೇಶ್ ಅವರಿಂದಲೇ ಸಿಎಂಗೆ ಕಂಟಕ ಬಂದಿದೆ ಅಂತ ಮಾತನಾಡಿಕೊಳ್ಳುತ್ತಿದ್ದರು.

ಇದೀಗ ಒಂದೆಡೆ ಲೋಕಾಯುಕ್ತದಲ್ಲಿ ಕ್ಲೀನ್ ಚಿಟ್, ಮತ್ತೊಂದೆಡೆ ಸಿಬಿಐಗೆ ಪ್ರಕರಣ ವರ್ಗಾವಣೆ ಬೇಡ ಎಂದು ನ್ಯಾಯಾಲಯ ಆದೇಶಿಸಿದ್ದು ಹೀಗಾಗಿ ಸಿಎಂ ಸಿದ್ದರಾಮಯ್ಯ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಈ ಹಿನ್ನೆಲೆ ಭೈರತಿ ಸುರೇಶ್ ಕೂಡ ನಿರಾಳರಾಗಿದ್ದು ಇದೀಗ ಹರಕೆ ತೀರಿಸಲು ಚಾಮುಂಡಿ ಬೆಟ್ಟ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

Key words: Relief, CM Siddaramaiah ,  Muda case,  minister m Bhairathi suresh

The post ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್: ಹರಕೆ ತೀರಿಸಲು ಮುಂದಾದ್ರಾ ಸಚಿವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...