16
February, 2026

A News 365Times Venture

16
Monday
February, 2026

A News 365Times Venture

ಮೇ 26ರಿಂದ SSLC ಪರೀಕ್ಷೆ-2 : ನೋಂದಣಿಗೆ ನಾಳೆಯೇ ಕಡೇ ದಿನ

Date:

ಮೈಸೂರು,ಮೇ.9,2025 (www.justkannada.in):  2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಪೂರ್ಣ ಉತ್ತೀರ್ಣತೆ ಹೊಂದಿರದ ವಿದ್ಯಾರ್ಥಿಗಳಿಗೆ ಮೇ 26 ರಿಂದ ಜೂನ್ 02 ರವರೆಗೆ ಪರೀಕ್ಷೆ-2 ನಡೆಯಲಿದ್ದು ನೋಂದಣಿಗೆ ನಾಳೆಯೇ(ಮೇ 10) ಕಡೇ ದಿನವಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಪರೀಕ್ಷೆಗೆ ಎಲ್ಲಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆಗಳಲ್ಲಿ ಶುಲ್ಕ ರಹಿತವಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ಅವಕಾಶ ಕಲ್ಪಿಸಿದ್ದು, ಮೇ 10 ರಂದು ನೋಂದಣಿಗೆ ಅಂತಿಮ ದಿನಾಂಕವಾಗಿರುತ್ತದೆ. ಜಿಲ್ಲೆಯಲ್ಲಿನ ಎಲ್ಲಾ ಶಾಲೆಗಳಲ್ಲಿ ಪೂರ್ಣ ಉತ್ತೀರ್ಣತೆ ಹೊಂದಿರದ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಣಿ ಮಾಡಿಸಲು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಂಬಂಧ ಪಟ್ಟ ಶಾಲಾ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಮೈಸೂರು ರವರು ಅನುಪಾಲನೆ ಮಾಡಿ ಯಾವುದೇ ವಿದ್ಯಾರ್ಥಿ ಪರೀಕ್ಷೆ-2 ರ ನೋಂದಣಿಯಿoದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದೆ ಇರುವ ಹಾಗೂ ಮಾರ್ಚ್ 01.2025 ಕ್ಕೆ 15 ವರ್ಷ ತುಂಬಿದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-2 ಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ಅವಕಾಶ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: SSLC Exam-2, May 26, registration, May 9, Last day

The post ಮೇ 26ರಿಂದ SSLC ಪರೀಕ್ಷೆ-2 : ನೋಂದಣಿಗೆ ನಾಳೆಯೇ ಕಡೇ ದಿನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ....

ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ...

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು...

ಮೈಸೂರು ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ” Gen Z”  ಥೀಮ್ ಪೋಸ್ಟ್ ಆಫೀಸ್ ಯೋಜನೆ

  ಮೈಸೂರು, ಫೆ.೧೪,೨೦೨೬:  ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ‘Gen Z...