12
February, 2026

A News 365Times Venture

12
Thursday
February, 2026

A News 365Times Venture

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜನವರಿ,25,2025 (www.justkannada.in): ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ನೀಡುತ್ತಿದ್ದ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರೂಪಿಸಲು ಮುಂದಾಗಿದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು..

ಬಲವಂತದ ಸಾಲ ವಸೂಲಾತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುತ್ತದೆ.  ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.  ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು. ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಇಲ್ಲಿ ದೂರು ನೀಡಬಹುದು.  ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ ನೀಡಲಾಗಿದೆ ಎಂದರು.

Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು.  ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Microfinance, harassment, New law, CM Siddaramaiah

The post ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ

  ಬೆಂಗಳೂರು, ಫೆ.೧೨,೨೦೨೬ : ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ...

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ...

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ...

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ...