13
July, 2025

A News 365Times Venture

13
Sunday
July, 2025

A News 365Times Venture

ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಬರುತ್ತಿದೆ- ಡಾ.ಸೀತಾಲಕ್ಷ್ಮಿ

Date:

ಮೈಸೂರು,ಜೂನ್,20,2025 (www.justkannada.in):  ಮೈಸೂರು ನಗರವನ್ನು ಯೋಗ ನಗರವನ್ನಾಗಿಸುವ ಕಾಲ ಬರುತ್ತಿದೆ ಎಂದು  ಸರಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಮೇಟಗಳ್ಳಿಯಲ್ಲಿರುವ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ವೈಜ್ಞಾನಿಕ ಪ್ರಾಣಾಯಾಮ  ಫೌಂಡೇಶನ್  ಟ್ರಸ್ಟ್ ವತಿಯಿಂದ ಹಾಗೂ ಎಟಿಎಂಇ ಇಂಜಿನಿಯರಿಂಗ್ ಕಾಲೇಜು,  ಬೆಂಗಳೂರು ಆರ್.ವಿ ಇಂಜಿನಿಯರಿಂಗ್ ಕಾಲೇಜು ಮತ್ತು ಭಾರತೀಯ ಯೋಗ ಸಂಘಟನೆ ಸಹಕಾರದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ವಿಚಾರ ಸಂಕಿರಣ ಯೋಗ ಪ್ರಾಣೋತ್ಸವ-2025 ಸಮಾರೋಪ ಸಮಾರಂಭದಲ್ಲಿ  ಮಾತನಾಡಿದರು.

ಯೋಗ ಜನರ ಬದುಕನ್ನು ಸದೃಢವಾಗಿಸುವಲ್ಲಿ ಅತ್ಯಂತ ಪರಿಣಾಮಾತ್ಮಕ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರು ಯೋಗ ಹಾಗೂ ಪ್ರಾಣಾಯಾಮದ ಮೊರೆ ಹೋಗಬೇಕು ಆಗ ಮಾತ್ರ ಆರೋಗ್ಯ ಜೀವನ ಸಾಧ್ಯ, . ಪ್ರಸ್ತುತ ಎಲ್ಲರೂ ಒತ್ತಡದ ಬದುಕಿನಲ್ಲಿ ಸಿಲುಕಿದ್ದಾರೆ. ನಮಗೆ ನಾವು ಸಮಯವನ್ನು ಮೀಸಲಿರಸದಿದ್ದರೆ, ಮುಂದೆ ಆಸ್ಪತ್ರೆಗಳಿಗೆ ಹಣ ವ್ಯಯ ಮಾಡುವ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ಕಾರ್ಯಕ್ರಮದಲ್ಲಿ ವಿದುಷಿ ಡಾ. ತುಳಸಿ ರಾಮಚಂದ್ರ ಅವರ‌ ನೇತೃತ್ವದಲ್ಲಿ ಪ್ರಾಣ ತತ್ವ ವಿಕಾಸ – ಯೋಗ ನೃತ್ಯವನ್ನು ನಡೆಸಿಕೊಟ್ಟರು. ವೈಜ್ಞಾನಿಕ ಪ್ರಾಣಾಯಾಮದ ಸೆಮಿನಾರ್‌ ನಲ್ಲಿ ಆರೋಗ್ಯಕ್ಕಾಗಿ ಪ್ರಾಣಾಯಾಮ ಶೀರ್ಷಿಕೆಯಡಿ ಪೇಪರ್ ಪ್ರೆಸೆಂಟ್ ಅನ್ನು 42 ಮಂದಿ ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಕ್ಯಾನ್ಸರ್ ಕೇರ್ ಇಂಡಿಯಾ ನ್ಯೂರೋ ಸರ್ಜನ್ ಡಾ. ರಾಜಶೇಖರ್ ರೆಡ್ಡಿ ಪೊರೆಡ್ಡಿ, ಶ್ರೀ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆ ಮಹಾ ಮೇದಾನಂದಜಿ ಸ್ವಾಮಿಜೀ, ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎಲ್.ಬಸವರಾಜ್, ವೈಜ್ಞಾನಿಕ ಪ್ರಾಣಾಯಾಮ  ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕಿ ಡಾ.ದೇವಕಿ ಮಾಧವ್ ಉಪಸ್ಥಿತರಿದ್ದರು.vtu

Key words: Mysore, International Yoga Day, GSSS Engineering and Technology College

 

The post ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಬರುತ್ತಿದೆ- ಡಾ.ಸೀತಾಲಕ್ಷ್ಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...