13
November, 2025

A News 365Times Venture

13
Thursday
November, 2025

A News 365Times Venture

ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿದ ಅವಳಿ ಚಿತ್ರಮಂದಿರ

Date:

ಮೈಸೂರು,ಮಾರ್ಚ್,5,2025 (www.justkannada.in): ಮೈಸೂರಿನ  ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಈ ಎರಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿವೆ.

ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿರಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಹಲವಾರು ಜನಪ್ರಿಯ ಚಿತ್ರಗಳು ಪ್ರದರ್ಶನ ಕಂಡಿದ್ದವು. ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್  ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು.

ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ. ಮೈಸೂರಿನಲ್ಲಿ ಈಗಾಗಲೇ ರಣಜಿತ್, ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಚಿತ್ರಮಂದಿರಗಳು ನೆಲಸಮಗೊಂಡಿವೆ. ಇತ್ತೀಚೆಗೆ  ಲಕ್ಷ್ಮಿ ಹಾಗೂ ಸರಸ್ವತಿ ಚಿತ್ರಮಂದಿರಗಳನ್ನೂ ನೆಲಸಮ ಮಾಡಲಾಗಿತ್ತು.  ಅವುಗಳ ಸಾಲಿಗೆ ಇದೀಗ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸವೆನಿಸಿದೆ.

ಅವಳಿ ಚಿತ್ರಮಂದಿರ ‌ಧರಾಶಾಹಿಯಾಗಿದ್ದನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೈಸೂರಿನಲ್ಲೀಗ ಕೇವಲ ಬೆರಳೆಣಿಕೆಯಷ್ಟು ಚಿತ್ರಮಂದಿರಗಳು ಮಾತ್ರ ಇವೆ.  ಅವುಗಳನ್ನಾದರೂ ಉಳಿಸಿಕೊಳ್ಳಬೇಕು ಎಂಬುದು ಸಿನಿಮಾ ಪ್ರೇಕ್ಷಕರ ಆಶಯವಾಗಿದೆ.

Key words: Sterling, Skyline,  Theaters, history ,  Mysore

The post ಮೈಸೂರಿನಲ್ಲಿ ಇತಿಹಾಸದ ಪುಟ ಸೇರಿದ ಅವಳಿ ಚಿತ್ರಮಂದಿರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...