14
July, 2025

A News 365Times Venture

14
Monday
July, 2025

A News 365Times Venture

ಮೈಸೂರಿನಲ್ಲಿ40 ಮರಗಳ ಕಡಿದ ಜಾಗದಲ್ಲೇ ಗಿಡ ನೆಟ್ಟ ರೈತರು.

Date:

ಮೈಸೂರು,ಏಪ್ರಿಲ್,16,2025 (www.justkannada.in): ರಸ್ತೆ ಅಗಲೀಕರಣ ನೆಪವೊಡ್ಡಿ ಮೈಸೂರಿನ ಎಸ್ಪಿ ಕಛೇರಿ ಬಳಿ 40 ಮರಗಳ ಕಡಿದ ಜಾಗದಲ್ಲೇ ಇದೀಗ ರೈತರು ಗಿಡ ನೆಟ್ಟಿದ್ದಾರೆ.

ರಾಜ್ಯ ರೈತ ಸಂಘದ ರೈತರಿಂದ ಗಿಡ ನೆಡುವ ಕಾರ್ಯಕ್ರಮ ನಡೆದಿದ್ದು ರೈತರು ವಿವಿಧ ತಳಿಯ ಗಿಡ ನೆಟ್ಟಿದ್ದಾರೆ. ಸಾಮೂಹಿಕ ರೈತ ಸಂಘದ ಜಿಲ್ಲಾಧ್ಯಕ್ಷ ಮಂಜುಕಿರಣ್ ನೇತೃತ್ವದಲ್ಲಿ ಗಿಡ ನೆಡುವ ಅಭಿಯಾನ ನಡೆಸಿದ್ದು ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳ ನಡೆಗೆ ವ್ಯಾಪಕ ಖಂಡನೆ ವ್ಯಕ್ತಪಡಿಸಿದರು.

ರಸ್ತೆ ಅಗಲೀಕರಣ ನೆಪವೊಡ್ಡಿ ಮೈಸೂರಿನ ಎಸ್ಪಿ ಕಛೇರಿ ಬಳಿ  40 ಆರೋಗ್ಯಕರ ಮರಗಳಿಗೆ ಕತ್ತರಿ ಹಾಕಲಾಗಿತ್ತು. ಈ ಸಂಬಂಧ  ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಮರ ಕಡಿದವರ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಸದ್ಯ ರೈತರು ಗಿಡನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿದ್ದಾರೆ. ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳಿಂದಲೂ ಗಿಡ ನೆಡುವ ಅಭಿಯಾನ ಆರಂಭಿಸಿದ್ದು ಪೊಲೀಸರು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

Key words: Farmers, planted, trees, Mysore, 40 trees, cut down.

The post ಮೈಸೂರಿನಲ್ಲಿ40 ಮರಗಳ ಕಡಿದ ಜಾಗದಲ್ಲೇ ಗಿಡ ನೆಟ್ಟ ರೈತರು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....