7
March, 2026

A News 365Times Venture

7
Saturday
March, 2026

A News 365Times Venture

ಮೈಸೂರು-ಕುಶಾಲನಗರ ರಸ್ತೆ ಯೋಜನೆ ನಿಗದಿತ ದಿನಾಂಕ ಘೋಷಿಸಿ- ಕೇಂದ್ರ ಸಚಿವರಿಗೆ ಸಂಸದ ಯದುವೀರ್‌ ಮನವಿ

Date:

ಮೈಸೂರು, ಆಗಸ್ಟ್,1,2025 (www.justkannada.in):  ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಹೆಚ್ಚುವರಿ ಸಂಪರ್ಕ ಸೇವೆ ಕಲ್ಪಿಸಲು ಬದ್ಧವಾಗಿರುವ ಕೇಂದ್ರ ಸರ್ಕಾರ, ಅತಿ ಕೂಡಲೇ ಮೈಸೂರು-ಕುಶಾಲನಗರ ಹೆದ್ದಾರಿಯ ಎರಡನೇ ಹಂತದ ಯೋಜನೆ ಚಾಲನೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಸಂಸದ ಯದುವೀರ್, 2023ರ ಜುಲೈ 19ರಂದು ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿತ್ತು. ಎರಡನೇ ಪ್ಯಾಕೇಜ್‌ನಲ್ಲಿ 22.70 ಕಿಲೋಮೀಟರ್‌  ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಇದಕ್ಕಾಗಿ ಈಗಾಗಲೇ 14.522 ಕಿಲೋ ಮೀಟರ್‌ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಾಕಿ ಉಳಿದಿರುವ 8.178 ಕಿಲೋಮೀಟರ್‌ ಅರಣ್ಯ ಭೂಮಿ ಸ್ವಾಧೀನಕ್ಕೆ ಅರಣ್ಯ ಇಲಾಖೆಯ ಅನುಮೋದನೆ ಅಗತ್ಯವಿದೆ ಎಂದು ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ಯೋಜನೆಯ ಘೋಷಣೆಗೆ ಸಚಿವಾಲಯ ಮುಂದಾಗಬೇಕು. ಕಾಲಮಿತಿಯಲ್ಲಿ ಅರಣ್ಯ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸಚಿವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್ ಒಡೆಯರ್‌ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೂಡಲೇ ಯೋಜನೆಯ ಆರಂಭದ ದಿನಾಂಕ ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿತಿನ್‌ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದೇವೆ . ಮನವಿ ಪತ್ರ ಸ್ವೀಕರಿಸಿದ ನಂತರ ನಿತಿನ್‌ ಗಡ್ಕರಿ ಅವರು ಸೂಕ್ತ ಕ್ರಮ ಕೈಗೊಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ಹುಲಿ ಕಾರಿಡಾರ್‌ ರಕ್ಷಣೆಗೆ ತನಿಖೆಗಾಗಿ ಮಾರ್ಗಸೂಚಿ

ಕರ್ನಾಟಕದಲ್ಲಿ ದೀರ್ಘಕಾಲಿನ ಹುಲಿ ಆವಾಸಸ್ಥಾನ ಬಲಪಡಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ಸಂಸದ ಯದುವೀರ್‌ ತಿಳಿಸಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ಸಂಸದ ಯದುವೀರ್‌ ಈ ಕುರಿತು ಕೇಂದ್ರ ಅರಣ್ಯ ಸಚಿವರಿಗೆ ಪ್ರಶ್ನೆ ಕೇಳಿದ ಸಂದರ್ಭದಲ್ಲಿ ಈ ಉತ್ತರ ನೀಡಲಾಗಿದೆ.

ಮಹದೇಶ್ವರ ಬೆಟ್ಟಗಳ ಅಭಯಾರಣ್ಯದಲ್ಲಿ ಕಾಡು ಪ್ರಾಣಿಗಳ ಸಾವು, ವನ್ಯಜೀವಿ, ವಿಧಿ ವಿಜ್ಞಾನ, ವಿಷಶಾಸ್ತ್ರದ ಬಗ್ಗೆ ಮಾರ್ಗಸೂಚಿಗಳನ್ನು ಹೊಂದಿರುವ ಬಗ್ಗೆ  ಮಾಹಿತಿ ಕೋರಲಾಗಿತ್ತು ಎಂದು ಸಂಸದ ಯದುವೀರ್ ವಿವರಿಸಿದ್ದಾರೆ.

ಪ್ರಾಜೆಕ್ಟ್‌ ಟೈಗರ್‌ ಯೋಜನೆಯಡಿಯಲ್ಲಿ ಹುಲಿ ಮೀಸಲು ಪ್ರದೇಶಗಳಲ್ಲಿ ಆವಾಸಸ್ಥಾನ ರಕ್ಷಣೆ, ಜಾಗೃತಿ, ಸಮುದಾಯ ಜಾಗರೂಕತೆಗೆ ಹೆಚ್ಚಿನ ಹಣ ಒದಗಿಸಲಾಗುತ್ತಿದೆ ಎಂದು ಸಂಸದ ಯದುವೀರ್‌ ತಿಳಿಸಿದ್ದಾರೆ ಎಂದರು.vtu

Key words: MP Yaduveer, Meet, Union Ministers, Nithin gadgari

The post ಮೈಸೂರು-ಕುಶಾಲನಗರ ರಸ್ತೆ ಯೋಜನೆ ನಿಗದಿತ ದಿನಾಂಕ ಘೋಷಿಸಿ- ಕೇಂದ್ರ ಸಚಿವರಿಗೆ ಸಂಸದ ಯದುವೀರ್‌ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...