14
July, 2025

A News 365Times Venture

14
Monday
July, 2025

A News 365Times Venture

ಮೈಸೂರು ಪಾಕ್ ಹೆಸರು ಬದಲಾವಣೆ ಮತ್ತು MSDL ರಾಯಭಾರಿ ಕುರಿತು ಸಂಸದ ಯದುವೀರ್ ಪ್ರತಿಕ್ರಿಯೆ ಏನು..?

Date:

ಮೈಸೂರು,ಮೇ,27,2025 (www.justkannada.in):  ರಾಜ್ಯದಲ್ಲಿ ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರ ಮತ್ತು ಮೈಸೂರು ಪಾಕ್ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಈ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಯದುವೀರ್, ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ. ಪಾಕ ಎನ್ನುವ ಸಂಸ್ಕೃತ ಅದು. ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್  ಎಂಬ ಪದ ಇದೆ ಎಂದು ಅದನ್ನ ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್ ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಎಷ್ಟೋ ಹೆಸರುಗಳ ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದು ಹೇಳಿದರು.

ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ

ಎಂಎಸ್ ಡಿಎಲ್ ರಾಯಭಾರಿಯಾಗಿ ತಮನ್ನಾ ನೇಮಕ ವಿಚಾರ ಮತ್ತು ತಾವೇ ಎಂಎಸ್ ಡಿಎಲ್ ರಾಯಭಾರಿಯಾಗಲು ಆಗ್ರಹ ಕೇಳಿ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ರಾಯಭಾರಿಯಾಗಲು ನಿರಾಕರಿಸಿದ್ದಾರೆ.

ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ. ನಾನು ಜನ ಸೇವಾ ಕ್ಷೇತ್ರದಲ್ಲಿದ್ದೇನೆ. ನಾನು ಅದಕ್ಕೆಲ್ಲ ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷಿಗ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದರು.

Key words: MP, Yaduveer, Mysore Pak, name, change, , MSDL, ambassador

The post ಮೈಸೂರು ಪಾಕ್ ಹೆಸರು ಬದಲಾವಣೆ ಮತ್ತು MSDL ರಾಯಭಾರಿ ಕುರಿತು ಸಂಸದ ಯದುವೀರ್ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ...

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ..

ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ...

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ...

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್...