10
March, 2026

A News 365Times Venture

10
Tuesday
March, 2026

A News 365Times Venture

ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟ ದೇವಾಲಯದ ಅರ್ಚಕ  ದೇವಪ್ರಸಾದ್ ದೀಕ್ಷಿತ್  ಅವರ  ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.

ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಸಿದ್ದಾಂತ್  ಎಂಬಾತ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ದೇವಪ್ರಸಾದ್ ದೀಕ್ಷಿತ್  ಅವರ ಕುಟುಂಬ ಮೈಸೂರಿನ‌ ಸಿದ್ದಾರ್ಥ ನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು,  ಅದೇ ಬಡಾವಣೆಯಲ್ಲಿ ಪ್ರೊ. ಸಂತೋಷ್ ಕುಟುಂಬ ಸಹ ಇದೆ.

ಈ ಮಧ್ಯೆ ಸಿದ್ದಾಂತ್  ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಏಕಾಏಕಿ ದೇವಪ್ರಸಾದ್ ದೀಕ್ಷಿತ್ ಅವರ ಮನೆಗೆ ನುಗ್ಗಿ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಕೊಡದಿದ್ದಾಗ ದೇವಪ್ರಸಾದ್ ದೀಕ್ಷಿತ್ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದು, ಆ ವೇಳೆಗೆ ಮನೆಗೆ ಬಂದ ದೇವಪ್ರಸಾದ್ ದೀಕ್ಷಿತ್ ಮಗ ಸುದೇವ್ ನೆರೆಹೊರೆಯವರ ಸಹಾಯ ಪಡೆದು ಸಿದ್ದಾಂತ್ ನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮಗನ ಹುಚ್ಚಾಟದ ವಿಚಾರ ಗೊತ್ತಾಗಿ ಪ್ರೊ. ಸಂತೋಷ್ ಪತ್ನಿ ಹಾಗೂ ಸಿದ್ದಾಂತ್ ತಾಯಿಯು  ದೀಕ್ಷಿತ್ ರ ಮನೆಗೆ ಬಂದು ಗೋಳಾಡಿದ್ದಾರೆ. ಸಿದ್ದಾಂತ್ ತಾಯಿಯ ಗೋಳಾಟ ಕಂಡು ಮರುಗಿದ ದೇವ ಪ್ರಸಾದ್ ಕುಟುಂಬ ಫೊಲೀಸರಿಗೆ ದೂರು ಕೊಡಲು ಹಿಂದೇಟು ಹಾಕಿದ್ದಾರೆ.

Key words: Drug addict, youth, Attack, priests, Chamundi Hills

The post ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...