16
July, 2025

A News 365Times Venture

16
Wednesday
July, 2025

A News 365Times Venture

ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

Date:

ಮೈಸೂರು ಜೂನ್,10,2025 (www.justkannada.in): ನಗರದ ಅಂಬಾವಿಲಾಸ ಅರಮನೆ ಮೈದಾನದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು’ ಎಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಾ.ಪಿ. ಶಿವರಾಜು ಅವರು ಮಾತನಾಡಿದರು.

ಮೈಸೂರು ಯೋಗಕ್ಕೆ ಪ್ರಸಿದ್ಧವಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಭಾಗವಹಿಸುವುದು ಮುಖ್ಯವಾಗಿದೆ‌. ಅಂದು ಬೆಳಿಗ್ಗೆ 6 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, 15 ಸಾವಿರ ಯೋಗಪಟುಗಳು ಭಾಗವಹಿಸುವರು. ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಯೋಗದಲ್ಲಿ  ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿರಬೇಕು. ಯೋಗ ಮ್ಯಾಟ್ ಅವರೇ ತರಬೇಕು. ಜೂನ್ 15 ರಂದು ಪೂರ್ವಾಭ್ಯಾಸ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು ಎಂದು ಹೇಳಿದರು.

ಜೆ.ಎಸ್.ಎಸ್ ಸಂಸ್ಧೆ, ಸಿಸ್ಮಾಮ್ ಸ್ಕೂಲ್ ಮ್ಯಾನೆಂಜಮೆಂಟ್, ಯೋಗ ಫೆಡರೇಷನ್, ಯೋಗ ಒಕ್ಕೂಟ, ಯೋಗ ತರಬೇತಿ ಸಂಸ್ಥೆ, ಎನ್.ಸಿ.ಸಿ,  ಎನ್.ಎಸ್.ಎಸ್ ಹಾಗೂ ಶಾಲಾ ಕಾಲೇಜುಗಳಿಂದ ಯೋಗದಿಂದ ಜನರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್‌, ಫೈಯರ್‌, ಕುಡಿಯುವ ನೀರು ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು. ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ, ಕೆ.ಎಸ್‌.ಆರ್.ಟಿ.ಸಿ ವತಿಯಿಂದ ಯೋಗಾಸಕ್ತರಿಗೆ ಬಸ್ಸಿನ ವ್ಯವಸ್ಥೆ ಹಾಗೂ ಅರಮನೆ ಮಂಡಳಿಯಿಂದ ಅರಮನೆ ಆವರಣದಲ್ಲಿ ಸ್ಥಳಾವಕಾಶ ವ್ಯವಸ್ಥೆ ಹಾಗೂ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯಲು ಹೆಚ್ಚಿನ ಸ್ವಯಂ ಸೇವಕರನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳವಂತೆ ತಿಳಿಸಿದರು. ಯೋಗದಲ್ಲಿ ಭಾಗವಹಿಸಿದವರಿಗೆ ಸರ್ಟಿಫಿಕೇಟ್ ನೀಡಬೇಕು. ಕಾರ್ಯಕ್ರಮಕ್ಕೆ ಅಗತ್ಯವಾದ ಪ್ರಚಾರ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಯೋಗ ದಿನದ ಪ್ರಚಾರ ಸಾಮಗ್ರಿಯನ್ನು ಅಪರ  ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ, ಡಿಡಿಪಿಐ ಜವರೇಗೌಡ, ಆಯುಷ್ ಅಧಿಕಾರಿ ರೇಣುಕಾ ದೇವಿ, ಯೋಗ ಒಕ್ಕೂಟದ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Yoga Day, Mysore, ADC, instructions, necessary, preparations

The post ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...