20
August, 2026

A News 365Times Venture

20
Thursday
August, 2026

A News 365Times Venture

ರಾಜೀವ್‌ ಗಾಂಧಿ, ದೇವರಾಜ ಅರಸು ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು-ಮಾಜಿ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಆಗಸ್ಟ್, 20,2026 (www.justkannada.in):  ಮುತ್ಸದ್ದಿ ನಾಯಕರಾದ ರಾಜೀವ್‌ ಗಾಂಧಿ ಮತ್ತು ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರು ಮಹಾನ್‌ ನಾಯಕರ ಜನ್ಮದಿನ ಒಂದೇ ಎಂಬುದು ವಿಶೇಷ. ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾದ ರಾಜೀವ್‌ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮದಿನಾಚರಣೆಯಲ್ಲಿ ಮಾತನಾಡಿದ  ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೇಶದಲ್ಲೇ ಅತ್ಯಂತ ಸಣ್ಣ ವಯಸ್ಸಿಗೆ ರಾಜೀವ್‌ ಗಾಂಧಿ ಅವರು ಪ್ರಧಾನಿಯಾದರು. ಅವರು ಈಗ ಬದುಕಿದ್ದಿದ್ದರೆ 82 ವರ್ಷವಾಗುತ್ತಿತ್ತು. ಆದರೆ ದುಷ್ಕರ್ಮಿಗಳ ದಾಳಿಗೆ ಬಲಿಯಾದರು. ಅವರು ಬದುಕಿದ್ದಿದ್ದರೆ ಇನ್ನೊಮ್ಮೆ ಪ್ರಧಾನಿಯಾಗುತ್ತಿದ್ದರು, ಆಗ ಈ ದೇಶದ ಅಭ್ಯುದಯ ಸಾಧ್ಯವಾಗುತ್ತಿತ್ತು ಎಂದರು.

ರಾಜೀವ್‌ ಗಾಂಧಿ ಅವರು ಹತ್ಯೆಯಾದ ಸಂದರ್ಭ ನಾನು ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಆಗ ಚುನಾವಣೆ ಮುಂದೂಡಲಾಯಿತು. ಅದರ ಪರಿಣಾಮ ನಾನು ಸೋಲಬೇಕಾಯಿತು. ಹಾಗಾಗಿ ರಾಜ್ಯ ರಾಜಕಾರಣದಲ್ಲೇ ನೆಲೆಯೂರುವಂತಾಯಿತು. ಒಂದು ವೇಳೆ ರಾಜೀವ್‌ ಗಾಂಧಿ ಅವರ ಹತ್ಯೆ ಆಗದೆ ಇದ್ದಿದ್ದರೆ ನಾನು ಗೆದ್ದು, ಲೋಕಸಭಾ ಸದಸ್ಯನಾಗುತ್ತಿದ್ದೆ. ನನ್ನ ರಾಜಕೀಯ ನಡೆ ಬೇರೆಯಾಗಿರುತ್ತಿತ್ತು. ಬಹುಶಃ ನಾನು ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಅಂದಿನ ಘಟನೆಯನ್ನು ಸ್ಮರಿಸಿದರು.

ರಾಜೀವ್‌ ಗಾಂಧಿ ಅವರು ಯುವಜನತೆ ಮೇಲೆ ಅಪಾರವಾದ ನಂಬಿಕೆ ಇಟ್ಟಿದ್ದರು. ಅವರನ್ನು ಭವಿಷ್ಯದ ಪ್ರಜೆಗಳು ಎನ್ನುತ್ತಿದ್ದರು. ಬಲಿಷ್ಠ ರಾಷ್ಟ್ರ ಕಟ್ಟುವ ಕನಸು ಕಂಡಿದ್ದರು. ಅದಕ್ಕಾಗಿಯೇ ಯುವ ಜನತೆಗೆ 18 ವರ್ಷಕ್ಕೆ ಮತದಾನದ ಹಕ್ಕನ್ನು ನೀಡಿದರು. 21ನೇ ಶತಮಾನದ ಕನಸನ್ನು ಕಂಡಿದ್ದರು. ಆ ದಿಕ್ಕಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದರು. ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದೂರಸಂಪರ್ಕ ವಿಭಾಗದಲ್ಲಿ ಬಹಳಷ್ಟು ಕೆಲಸ ಮಾಡಿದ್ದಾರೆ. ಇಂದು ನಮ್ಮ ದೇಶದ ಯಾವುದೇ ಮೂಲೆಯಿಂದ ಜಗತ್ತಿನ ಅನೇಕ ಭಾಗಗಳಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದ್ದರೆ ಅದಕ್ಕೆ ರಾಜೀವ್‌ ಗಾಂಧಿ ಕಾರಣ ಎಂದರು.

ಆಡಳಿತದಲ್ಲಿ ಎಲ್ಲರಿಗೂ ಅಧಿಕಾರ ಮತ್ತು ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಹಿಂದುಳಿದ ವರ್ಗದ ಜನರಿಗೆ, ಮಹಿಳೆಯರಿಗೆ, ಯುವಕರಿಗೆ, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರಿಗೆ ಸಂವಿಧಾನದ 73, 74ನೇ ತಿದ್ದುಪಡಿ ಮಾಡುವ ಮೂಲಕ ಮೀಸಲಾತಿ ಕೊಟ್ಟಿದ್ದು ರಾಜೀವ್‌ ಗಾಂಧಿ ಎಂಬುದನ್ನು ಮರೆಯಲು ಸಾಧ್ಯವಿಲ್ಲ. ಮಹಿಳೆಯರಿಗೆ 33% ಮೀಸಲಾತಿ ಕೊಡುವ ಮೂಲಕ ಮಹಿಳೆಯರನ್ನು ಸಮಾಜದ ಮುನ್ನೆಲೆಗೆ ತರುವ ಪ್ರಯತ್ನ ನಡೆಸಿದರು. ಇಂದು 50% ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ರಾಜೀವ್‌ ಗಾಂಧಿ ಕಾರಣ ಎಂದರು.

ದೇವರಾಜ ಅರಸು ಅವರು ನಮ್ಮ ಮೈಸೂರಿನ ಕಲ್ಲಹಳ್ಳಿಯವರು. ನಾಲ್ವಡಿ ಕೃಷ್ಣರಾಜ ಒಡೆಯರ್‌, ದೇವರಾಜ ಅರಸು ಮತ್ತು ನಾನು ಮೂವರು ಮೈಸೂರಿನವರು ಎಂಬುದು ವಿಶೇಷ. ನಾವೆಲ್ಲರೂ ಸಾಮಾಜಿಕ ನ್ಯಾಯಕ್ಕೆ ಮಿಡಿದಿದ್ದೇವೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಮಿಲ್ಲರ್‌ ಆಯೋಗವನ್ನು ರಚಿಸಿ, ವರದಿಯನ್ನು ತರಿಸಿ ಜಾರಿ ಮಾಡುವ ಮೂಲಕ ಮಹಿಳೆಯರಿಗೆ, ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಪ್ರಯತ್ನ ನಡೆಸಿದ್ದರು. 1972ರಲ್ಲಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರು ಹಾವನೂರು ಆಯೋಗವನ್ನು ರಚನೆ ಮಾಡಿ, ವರದಿಯನ್ನು ಸ್ವೀಕರಿಸಿ, ಶಿಕ್ಷಣದಲ್ಲಿ, ಉದ್ಯೋಗದಲ್ಲಿ ಅವಕಾಶವನ್ನು ಕಲ್ಪಿಸಿಕೊಟ್ಟರು ಎಂದು ಸಿದ್ದರಾಮಯ್ಯ ಅವರು ಹೇಳಿದರು.

8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅಂದಿನ ಕಾಲಘಟ್ಟದಲ್ಲಿ ಎಲ್ಲರಿಗೂ ಸಮಾನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಏಕೈಕ ಧೀಮಂತ ನಾಯಕ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರನ್ನು ಇಟ್ಟವರು. ಭೂಸುಧಾರಣೆ ಕಾಯ್ದೆ, ಮಲ ಹೊರುವ ಪದ್ಧತಿ ನಿಷೇಧ, ಸಾಲ ವಿಮೋಚನೆ ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದರು ಎಂದು ಸ್ಮರಿಸಿದರು.

ದೇಶದ ಸಂವಿಧಾನಕ್ಕಾಗಿ, ಪ್ರಜಾಪ್ರಭುತ್ವಕ್ಕಾಗಿ, ಸಮಸಮಾಜ ನಿರ್ಮಾಣಕ್ಕಾಗಿ, ಕಟ್ಟಕಡೆಯ ವ್ಯಕ್ತಿಗೂ ಘನತೆಯ ಬದುಕನ್ನು ಕಲ್ಪಿಸುವುದಕ್ಕಾಗಿ ದುಡಿದ ಧೀಮಂತ ನಾಯಕರಾದ ರಾಜೀವ್‌ ಗಾಂಧಿ ಮತ್ತು ದೇವರಾಜ ಅರಸು ಅವರ ಬಗ್ಗೆ ಇಂದಿನ ಯುವಜನತೆಗೆ ಹೆಚ್ಚೆಚ್ಚು ತಿಳಿಸಬೇಕು. ಈ ಕೆಲಸವನ್ನು ಖುದ್ದಾಗಿ ಕಾಂಗ್ರೆಸ್‌ ಪಕ್ಷ ಮತ್ತು ಕಾರ್ಯಕರ್ತರು ಮಾಡಬೇಕು. ಏಕೆಂದರೆ ಬಿಜೆಪಿಗರು ಈ ಕೆಲಸವನ್ನು ಮಾಡುವುದಿಲ್ಲ. ಕಾರಣ, ಅವರು ಸಾಮಾಜಿಕ ನ್ಯಾಯದ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದರು.

Key words:  ideals, Rajiv Gandhi, Devaraja Urs, youth, Former CM, Siddaramaiah

The post ರಾಜೀವ್‌ ಗಾಂಧಿ, ದೇವರಾಜ ಅರಸು ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು-ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸುವಿಕೆ: ಕೊಡಗು ಜನರ ಹಿತರಕ್ಷಣೆ ಭರವಸೆ ನೀಡಿದ ಸಂಸದ ಯದುವೀರ್

ಮೈಸೂರು,ಆಗಸ್ಟ್,20,2026 (www.justkannada.in): ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ...

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು...

ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಮಂಡ್ಯ,ಆಗಸ್ಟ್,20,2026 (www.justkannada.in):  ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ...

ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ

ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ ನೂರಕ್ಕೆ...