3
July, 2026

A News 365Times Venture

3
Friday
July, 2026

A News 365Times Venture

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ

Date:

ಬೆಂಗಳೂರು,ಜುಲೈ,2,2026 (www.justkannada.in):  ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ ಹೆಚ್ಚಳ ಮಾಡಿ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಮೂಲ ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ ಮಾಡಲಾಗಿದೆ.  ಸಾರಿಗೆ ನೌಕರರ ಮೂಲ ವೇತನ ಈ ತಿಂಗಳಿನಿಂದ ಹೆಚ್ಚಳವಾಗಲಿದ್ದು, 2025 ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ ಡಬ್ಲ್ಯುಕೆಆರ್‌ ಟಿಸಿ ಹಾಗೂ ಕೆಕೆಆರ್‌ ಟಿಸಿ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.05 ಲಕ್ಷಕ್ಕೂ ಹೆಚ್ಚು ನೌಕರರಿಗೆ ಈ ವೇತನ ಹೆಚ್ಚಳದ ಪ್ರಯೋಜನ ಸಿಗಲಿದೆ.

ನೌಕರರಿಗೆ ಬಾಕಿಯಾಗಿದ್ದ ಹಿಂಬಾಕಿ ಮೊತ್ತದ ಮೊದಲ ಕಂತನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ಹಂತ ಹಂತವಾಗಿ ಮುಂದಿನ ತಿಂಗಳುಗಳಲ್ಲಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ನೌಕರರಿಗೆ ಈ ಪರಿಷ್ಕರಣೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

Key words: Good news, transport employees, 12.5% ​​salary, hike

The post ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ

ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು...

ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ...

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ

ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು ತಿಂಗಳು...

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ ಜಾರ್ಜ್ ಸೂಚನೆ

ಬೆಂಗಳೂರು, ಜುಲೈ ,3,2026 (www.justkannada.in):  ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ...