12
December, 2025

A News 365Times Venture

12
Friday
December, 2025

A News 365Times Venture

ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಡೀಸೆಲ್ ಬೆಲೆ ಇಳಿಕೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಹೂಡಿರುವ ಮುಷ್ಕರ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ 3ನೇ ಸುತ್ತಿನ ಸಭೆಗೆ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಂಘದ ಜೊತೆ ವಿಧಾನಸೌಧದಲ್ಲಿ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಲಿದ್ದಾರೆ.  ಈಗಾಗಲೇ ಸಚಿವ ರಾಮಲಿಂಗರೆಡ್ಡಿ ಲಾರಿ ಮಾಲೀಕರ ಸಂಘದ ಜೊತೆ ಮೊದಲ ಸುತ್ತಿನ ಸಭೆ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ 2ನೇ ಸುತ್ತಿನ ಸಭೆ ನಡೆಸಿದ್ದರು. ಈ ಸಭೆಗಳು ವಿಫಲವಾಗಿದ್ದವು.

ನಂತರ ಲಾರಿ ಮಾಲೀಕರ ಸಂಘದ ಮುಷ್ಕರ ಮುಂದುವರೆದಿತ್ತು. ಇದೀಗ ಮತ್ತೆ ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗರೆಡ್ಡಿ ಸಭೆಗೆ ಮುಂದಾಗಿದ್ದಾರೆ.   ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಭೆ ನಿಗದಿಯಾಗಿತ್ತು. ಎಲ್ಲಾ ಜಿಲ್ಲಾಧ್ಯಕ್ಷರನ್ನ ಕರೆದು ಸಭೆ ಮೂಲಕ ಮುಷ್ಕರವನ್ನ ತೀವ್ರಗೊಳಿಸಲು ಪ್ಲಾನ್ ಮಾಡಲಾಗಿತ್ತು. ಅದರೆ ಇದೀಗ ಸಚಿವರೇ ಸಭೆ ನಡೆಸಲು ಮುಂದಾಗಿದ್ದು ಈ ಹಿನ್ನೆಲೆ ಲಾರಿ ಮಾಲೀಕರ ಸಭೆ ರದ್ದಾಗಿದೆ.

Key words: Lorry owners, strike,  Minister, Ramalingareddy, meeting

The post ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...