ಮೈಸೂರು,ಆಗಸ್ಟ್,21,2026 (www.justkannada.in): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮದಲ್ಲಿ ಮುಸ್ಲೀಂ ಬಾಂಧವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಸೌಹಾರ್ದತೆ ಸಂದೇಶ ಸಾರಿದರು.
ಕಚೇರಿಯಲ್ಲಿ ಲಕ್ಷ್ಮಿ ವಿಗ್ರಹಕ್ಕೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ ಪರಸ್ಪರ ಸೌಹಾರ್ದತೆ, ಸಹೋದರತ್ವ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಕವಿತಾ , ವೀಣಾ, ರಮ್ಯಾ ,ಯಶಸ್ವಿನಿ, ಮುಸಲ್ಮಾನ್ ಬಾಂಧವರಾದ ಅಮ್ರೀನ್, ಫಾತಿಮಾ, ನಜೀರ ಬೇಗಮ್, ಐರನ್, ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
Key words: Mysore, Muslim, Vara Mahalakshmi Puja
The post ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




