23
April, 2026

A News 365Times Venture

23
Thursday
April, 2026

A News 365Times Venture

“ವಿಜಯವಾಣಿ” ಪತ್ರಿಕೆಯ ಈ ಸುದ್ದಿ ಸಂಪೂರ್ಣ ಸುಳ್ಳು: ಡಿಸಿಎಂ ಮಾಧ್ಯಮ ಸಲಹೆಗಾರ

Date:

ಬೆಂಗಳೂರು, ಆ.೧೨,೨೦೨೫: “ಗಣೇಶ ವಿಗ್ರಹ ತಂದದ್ದು ಬಿಜೆಪಿ ಶಾಸಕ, ಪ್ರಧಾನಿಗೆ ಕೊಟ್ಟದ್ದು ಡಿಸಿಎಂ ಡಿ ಕೆ ಶಿವಕುಮಾರ್” ಎಂಬ ಸಾರಾಂಶ ಹೊತ್ತು “ವಿಜಯವಾಣಿ” ಪತ್ರಿಕೆಯಲ್ಲಿ ಪ್ರಕಟವಾಗಿರೋ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಡಿಸಿಎಂ ಮಾಧ್ಯಮ ಸಲಹೆಗಾರ ತ್ಯಾಗರಾಜ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ತ್ಯಾಗರಾಜ್‌ ಹೇಳಿರುವುದು ಹೀಗೆ….

ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಟ್ರೋಲ್ ಆಗಿದೆ. ಸತ್ಯ, ಅಸತ್ಯ ನೋಡದೇ, ತಲೆಬುಡ ಸೋಸದೇ “ಡಿಸಿಎಂ ಗುರಿ”ಕಾರರು ಈ ಸುದ್ದಿಯನ್ನು ಯದ್ವಾ-ತದ್ವಾ ಹಂಚಿಕೊಂಡಿದ್ದಾರೆ. ಬಾಯಿಗೆ ಬಂದಂತೆ ಟೀಕೆ ಮಾಡಿದ್ದಾರೆ!

ಆದರೆ ವಾಸ್ತವವಾಗಿ ಡಿಸಿಎಂ ಅವರೇ ಈ ಬೆಳ್ಳಿ ಗಣಪತಿ ವಿಗ್ರಹವನ್ನು ಅವರ ಮನೆಯಿಂದ ತೆಗೆದುಕೊಂಡು ಬಂದದ್ದು, ಅವರ ಕಚೇರಿ ಸಿಬ್ಬಂದಿಯೇ ಪ್ರಧಾನಿ ಭದ್ರತೆ ಹೊಣೆ ಹೊತ್ತ ಎಸ್ಪಿಜಿಯವರಿಗೆ ಕೊಟ್ಟು ತಪಾಸಣೆ ನಡೆಸಿದ್ದು, ಎಸ್ಪಿಜಿ ಸಿಬ್ಬಂದಿಯೇ ಈ ವಿಗ್ರಹವನ್ನು ಪ್ರಧಾನಿ ಅವರಿಗೆ ಡಿಸಿಎಂ ಅವರು ನೀಡಲು ನೆರವಾದದ್ದು!!

ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಸಲಹೆಗಾರನಾಗಿ ಈ ಎಲ್ಲಕ್ಕೂ ನಾನು ಪ್ರತ್ಯಕ್ಷ ಸಾಕ್ಷಿ.

ಎಲ್ಲಕ್ಕಿಂತ ಮಿಗಿಲಾಗಿ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಅವರೇ ನನಗೆ ದೂರವಾಣಿ ಕರೆ ಮಾಡಿ, “ಪೇಪರ್ ನಲ್ಲಿ ಸುಳ್ಳು ಸುದ್ದಿ ಹಾಕಿದ್ದಾರೆ. ನಾನು ಯಾರಿಗೂ ಈ ರೀತಿ ಹೇಳಿಲ್ಲ. ನಾನು ಸ್ಟೇಜ್ ಮೇಲೆ ಹೋಗೋಕೇ ಅವಕಾಶ ಇರಲಿಲ್ಲ. ಇನ್ನು ಪ್ರಧಾನಿಗೆ ಗಣೇಶ ವಿಗ್ರಹ ಹೇಗೆ ಕೊಡಲಿ? ಈ ಬಗ್ಗೆ ಪತ್ರಿಕೆಯವರಿಗೆ ಸ್ಪಷ್ಟನೆ ಕೊಡ್ತೇನೆ” ಅಂತ ಹೇಳಿದ್ರು.

ಹಾಗಾದರೆ ಈ ಸುದ್ದಿ ಸೃಷ್ಟಿಯಾದದ್ದು ಹೇಗೆ? ವರದಿ ಬರೆದ ಬೃಹಸ್ಪತಿಗೆ ಈ ಸುದ್ದಿ ಕೊಟ್ಟವರು ಯಾರು? ಸುದ್ದಿ ಕೆತ್ತುವ ಮುನ್ನ ಖಚಿತ ಮಾಡಿಕೊಳ್ಳಬೇಕು ಎನ್ನುವ ಸಾಮಾನ್ಯ ಪರಿಜ್ಞಾನ ಬೇಡವೇ?!

“ಸುದ್ದಿ ಸಣ್ಣದು, ಸುಳ್ಳು ದೊಡ್ಡದು, ಪ್ರಭಾವ ಕೆಟ್ಟದ್ದು”. ಪತ್ರಿಕೆಯವರಿಗೆ ಸ್ಪಷ್ಟನೆ ನೀಡಬಹುದು. ಆದರೆ ಸಾಮಾಜಿಕ ಜಾಲತಾಣದವರಿಗೆ?

ಹೀಗಾಗಿ ಈ ಪೋಸ್ಟ್..!

key words:  “Vijayavani” newspaper, completely false, DCM, media advisor

vtu

This news from “Vijayavani” newspaper is completely false: DCM’s media advisor

The post “ವಿಜಯವಾಣಿ” ಪತ್ರಿಕೆಯ ಈ ಸುದ್ದಿ ಸಂಪೂರ್ಣ ಸುಳ್ಳು: ಡಿಸಿಎಂ ಮಾಧ್ಯಮ ಸಲಹೆಗಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...