11
September, 2026

A News 365Times Venture

11
Friday
September, 2026

A News 365Times Venture

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

Date:

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ  ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು  ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.

ವಿಧಾನ ಪರಿಷತ್​ ನಲ್ಲಿ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಹಿರಿಯ ನಟಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾದರು.

Key words: Mankala Vaidya, Deputy Speaker, Umashree, Council, Deputy Chairperson

The post ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಸೆಳೆಯುವ ಉದ್ದೇಶದಿಂದ ಫ್ರಾನ್ಸ್ ಮತ್ತು...

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,ಸೆಪ್ಟಂಬರ್, 10,2026 (www.justkannada.in):  ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ...

 ಮೈಸೂರು: ವೃದ್ಧೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ

ಮೈಸೂರು, ಸೆಪ್ಟಂಬರ್,10, 2026 (www.justkannada.in):  ಮೈಸೂರಿನಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಸಿಯಲು...