28
February, 2026

A News 365Times Venture

28
Saturday
February, 2026

A News 365Times Venture

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

Date:

ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಈ ಕುರಿತು ತೀರ್ಪು ಪ್ರಕಟಿಸಿದ್ದ ಹೈಕೋರ್ಟ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ತೀರ್ಪು ಪ್ರಕಟಿಸಿತ್ತು.

ಈ ತೀರ್ಪು ಪ್ರಶ್ನಿಸಿ ಸುಬ್ಬಾರೆಡ್ಡಿ  ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಈ ಮೂಲಕ ಎಸ್.ಎನ್. ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Key words: Supreme Court,  stays, verdict MLA Subbareddy, High court

The post ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ- ಮಾಜಿ ಸಂಸದ ಡಿಕೆ ಸುರೇಶ್

ಬೆಂಗಳೂರು,ಫೆಬ್ರವರಿ,28,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ...

ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್

ಮೈಸೂರು,ಫೆಬ್ರವರಿ,27,2026 (www.justkannada.in):  ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್...

ಸಿಲ್ಕ್ & ಮಿಲ್ಕ್ ಎರಡೂ ರಾಜ್ಯದ ಬ್ರಾಂಡ್: ‘ಸೇವ್ ಮೈಸೂರು ಸಿಲ್ಕ್’ ಅಭಿಯಾನ ಮಾಡ್ತೇವೆ- ಆರ್.ಅಶೋಕ್

ಮೈಸೂರು,ಫೆಬ್ರವರಿ,27,2026 (www.justkannada.in): ಬೇಡಿಕೆಯೂ ಇದೆ, ಸಂಸ್ಥೆಯೂ ಇದೆ, ಲಾಭವೂ ಇದೆ. ಅಂತಹುದರಲ್ಲಿ...

 ನಾನು ಯಾವ ಶಕ್ತಿ ಪ್ರದರ್ಶನವನ್ನೂ ಮಾಡ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕೆಲ ಶಾಸಕರಿಂದ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಡಿನ್ನರ್...