12
July, 2025

A News 365Times Venture

12
Saturday
July, 2025

A News 365Times Venture

ಶಿಕ್ಷಕರು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸದ್ವಿಚಾರ, ಸಹಬಾಳ್ವೆ ರೂಪಿಸುವ ಸಾಮಾಜಿಕ ರಾಯಭಾರಿಗಳು- ಕೆ.ವಿ.ಪ್ರಭಾಕರ್

Date:

ಬೆಂಗಳೂರು ಮೇ,1,2025 (www.justkannada.in):  ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂದಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಕೆ.ವಿ.ಪ್ರಭಾಕರ್ ಮಾತನಾಡಿದರು.

ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂದನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂದಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ ಎಂದರು.

ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ  ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳುತ್ತಿರುತ್ತಾರೆ. ಇದು ಅಕ್ಷರಶಃ ನಿಜ. ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ.

ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳು ಮತ್ತು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್ ಗೆ ಇತ್ತು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳುತ್ತೇನೆ.

ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು. ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಈಗ ತಂತ್ರಜ್ಞಾನದ ಕಾರಣಕ್ಕೆ ಸಮಾಜ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಬದಲಾಗುತ್ತಾ ಶಿಕ್ಷಣದ ಅಗತ್ಯ ಮತ್ತು ಮಹತ್ವ ಕೂಡ ಬದಲಾಗುತ್ತಿದೆ.  ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ “ಮಾಲು” ಗಳನ್ನು ಮಾತ್ರ ಸೃಷ್ಟಿಸುವ ಒತ್ತಡವನ್ನು ಹೇರಲಾಗುತ್ತಿದೆ. ಈ ಸವಾಲನ್ನು ನಾವೆಲ್ಲರೂ ಅತ್ಯಂತ ಸಮನ್ವಯದಿಂದ ಎದುರಿಸಬೇಕಿದೆ.

ರಾಜಕೀಯ ಮಾರುಕಟ್ಟೆ, ಕಾರ್ಪೋರೇಟ್ ಮಾರುಕಟ್ಟೆಯ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ, ಸರ್ಕಾರಿ ಶಿಕ್ಷಕರ ವಿಚಾರದಲ್ಲಿ ಎರಡು ಮುಖ್ಯ ಸಂಗತಿಗಳನ್ನು ಮುಂದಿಟ್ಟು ಮಾತು ಮುಗಿಸುತ್ತೇನೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ‌ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿ ಆಗುತ್ತಿವೆ. ಆದರೆ, ಒಂದು ಸಮೀಕ್ಷೆಯ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಇಂಥಾ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಮಕ್ಕಳಲ್ಲಿ ಲಿಂಗ ಸೂಕ್ಷ್ಮತೆ, ಸಹಬಾಳ್ವೆ, ಸಹಿಷ್ಣತೆಯನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಬಹಳ ಮುಂದಿದ್ದಾರೆ. ಅದಕ್ಕೇ ಹೇಳೋದು, ಖಾಸಗಿ ಶಾಲೆಗಳ ಕಟ್ಟಡದ ಗುಣಮಟ್ಟ, ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ ಉನ್ನತ ಮಟ್ಟದ್ದಾಗಿರುತ್ತದೆ ಎಂದು ನುಡಿದರು.

ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. “ನನ್ನ‌ ಶಾಲೆ ನನ್ನ ಜವಾಬ್ದಾರಿ” ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ವು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ. ಇದೀಗ ತಣ್ಣಗಿನ‌ ಚಳವಳಿಯ ರೂಪ ಪಡೆದುಕೊಂಡಿದೆ ಎಂದು ಕೆ.ವಿ ಪ್ರಭಾಕರ್ ತಿಳಿಸಿದರು

ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಮೂಲಕ ನನ್ನ‌  ಶಾಲೆ ಮತ್ತು ಶಿಕ್ಷಕರುಗಳನ್ನು ಸ್ಮರಿಸಲು, ವಂದಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೀಡಿಯಾ ಕನೆಕ್ಟ್ ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್ ಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಆದಿಚುಂಚನಗಿರಿ ಮಹಾ ಸಂಸ್ಥಾನದ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜನ ಲಕ್ಷ್ಮೀನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: Teachers, social ambassadors, children,  K.V. Prabhakar

The post ಶಿಕ್ಷಕರು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸದ್ವಿಚಾರ, ಸಹಬಾಳ್ವೆ ರೂಪಿಸುವ ಸಾಮಾಜಿಕ ರಾಯಭಾರಿಗಳು- ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...