10
November, 2025

A News 365Times Venture

10
Monday
November, 2025

A News 365Times Venture

ಸಂಕಷ್ಟದಲ್ಲಿ ನಗರ ಪಾಲಿಕೆ : ಕೇಂದ್ರದ ಅನುದಾನಕ್ಕೆ ಕೊಕ್..!‌

Date:

 

ಮೈಸೂರು, ಫೆ.೦೬,೨೦೨೫ :   ನಗರ ಪಾಲಿಕೆಯಲ್ಲಿ ಚುನಾಯಿತ ಕೌನ್ಸಿಲ್ ಇಲ್ಲದಿರುವ ಕಾರಣ, ಕೇಂದ್ರದಿಂದ ಬರಬೇಕಾಗಿದ್ದ ಕೋಟ್ಯಾಂತರ ರೂ.ಗಳ ಅನುದಾನಕ್ಕೆ ಕೊಕ್. ಇದು‌ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅನೇಕ ಅಭಿವೃದ್ಧಿ ಕಾಮಗಾರಿಗಳ ಮೇಲೆ ದುಷ್ಪರಿಣಾಮ ಬೀರಿದೆ.

ಮಹಾನಗರ ಪಾಲಿಕೆಯಿಂದ 15 ನೇ ಹಣಕಾಸು ಅನುದಾನಕ್ಕೆ ಆಯೋಗದ ಸಂಬಂಧಿಸಿದಂತೆ ಯಾವುದೇ ಕಾಮಗಾರಿಗಳನ್ನು ಅನುದಾನ ಬಿಡುಗಡೆ ಆಗುವವರೆಗೂ ಕೈಗೊಳ್ಳಬಾರದು ಎಂದು ಪೌರಾಡಳಿತ ನಿರ್ದೇಶನಾಲಯ ನಿರ್ದೇಶನ ನೀಡಿದೆ.

‘ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯದ 43 ನಗರ ಸ್ಥಳೀಯ ಸಂಸ್ಥೆಗಳಲ್ಲಿ  ಚುನಾಯಿತ ಸದಸ್ಯರು ಇಲ್ಲ. ಪರಿಣಾಮ 2024-25ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದ ಅನುದಾನ ಪಡೆಯಲು ಮಾರ್ಗಸೂಚಿಯ ಅನ್ವಯ ಅನರ್ಹ.  ಆದ್ದರಿಂದ ಈ 43 ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆಯಾಗೋದು ಡೌಟು. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿಗಳನ್ನು ಅನುದಾನ ಬಿಡುಗಡೆ ಆಗುವರೆಗೂ ಕೈಗೊಳ್ಳದಂತೆ ಸೂಚಿಸಲಾಗಿದೆ.

ಸರ್ಕಾರದ ಕಾರ್ಯದರ್ಶಿಗಳ  ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಯೋಜನಾ ನಿರ್ದೇಶಕರ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ.

ಇವಕ್ಕೂ ಅನ್ವಯ:

ಚುನಾವಣೆ ನಡೆದಿಲ್ಲದಿರುವ ಬೋಗಾದಿ, ಕಡಕೊಳ, ರಮ್ಮನಹಳ್ಳಿ ಮತ್ತು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮತ್ತು ಹೂಟಗಳ್ಳಿ ನಗರಸಭೆಗೂ ಇದು ಅನ್ವಯವಾಗಲಿದೆ.

ಸರಕಾರದ ನಿರ್ಲಕ್ಷ್ಯದಿಂದಲೇ ತೊಡಕು:

‘15ನೇ ಹಣಕಾಸು ಆಯೋಗದ ಅನುದಾನ ಸರಾಸರಿ ₹60 ಕೋಟಿಗೂ ಅಧಿಕ ಮೊತ್ತ ಬಿಡುಗಡೆಯಾಗುತ್ತಿತ್ತು. ಇದನ್ನು ಬಳಸಿಕೊಂಡು ನಗರದ  ಒಳಚರಂಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಉದ್ಯಾನಗಳು ಹಾಗೂ ಬೀದಿದೀಪಗಳ ನಿರ್ವಹಣೆ ಮೊದಲಾದ ಕೆಲಸಗಳನ್ನು ಕೈಗೊಳ್ಳಲಾಗುತ್ತಿತ್ತು.

ಒಂದೆಡೆ ಜನಪ್ರತಿನಿಧಿಗಳಿಲ್ಲ,  ಇನ್ನೊಂದೆಡೆ ಕೇಂದ್ರದ ಅನುದಾನ ದೊರೆಯದಂತಹ ಸ್ಥಿತಿ ಎದುರಾಗಿದೆ. ಇದು, ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ತೊಡಕಾಗಿ ಪರಿಣಮಿಸಲಿದೆ’ ಎಂದು ಮಾಜಿ ಮೇಯರ್‌ ಶಿವಕುಮಾರ್ ಆರೋಪಿಸುತ್ತಾರೆ .

65 ವಾರ್ಡ್‌ಗಳನ್ನು ಹೊಂದಿರುವ ಮೈಸೂರು ಮಹಾನಗರಪಾಲಿಕೆಯ ಚುನಾಯಿತ ಆಡಳಿತ ಮಂಡಳಿಯ ಅಧಿಕಾರದ ಅವಧಿ 2023 ನ.16ರಂದು ಕೊನೆಗೊಂಡಿದೆ. ಅಲ್ಲಿಂದ ಈವರೆಗೂ ಚುನಾವಣೆ ನಡೆದಿಲ್ಲ.

key words: Municipal Corporation, crisis, Centre’s funds suspended, MCC, mysore

SUMMARY:

Municipal Corporation in crisis: Centre’s funds suspended. In the absence of an elected council in the municipal corporation, funds worth crores of rupees due from the Centre have been stopped. This has adversely affected many developments works within the municipal limits.

The post ಸಂಕಷ್ಟದಲ್ಲಿ ನಗರ ಪಾಲಿಕೆ : ಕೇಂದ್ರದ ಅನುದಾನಕ್ಕೆ ಕೊಕ್..!‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...