20
July, 2025

A News 365Times Venture

20
Sunday
July, 2025

A News 365Times Venture

ಸಂವಿಧಾನ ಮತ್ತು ಬಿಜೆಪಿ : ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ..!

Date:

ಮೈಸೂರು, ಮಾ.೨೫, ೨೦೨೫ : ಮೂಲ ಸಂವಿಧಾನವನ್ನ  ಬದಲಾವಣೆ ಮಾಡಲು ಯಾರಿಂದಲೂಸಾಧ್ಯವಿಲ್ಲ. ಮೀಸಲಾತಿ ಕೊಡುವ ಅಧಿಕಾರ ಇರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಇಂತಹ ಸಾಮಾನ್ಯ ಪರಿಜ್ಞಾನ ಇಲ್ಲದೆ ಬಿಜೆಪಿಯವರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಟೀಕಿಸಿದರು.

ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್  ಹೇಳಿದಿಷ್ಟು…

ದೇಶದಲ್ಲಿ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಅಲ್ಲೆಲ್ಲಾ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನ ಬಿಜೆಪಿಯವರು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ.

ಡಾ.ಅಂಬೇಡ್ಕರ್ ಸಂವಿಧಾನವನ್ನ ರಚನೆ ಮಾಡುವ ಸಂಧರ್ಭದಲ್ಲಿ ಜನ ಸಂಘ ವಿರೋಧ ಮಾಡಿತ್ತು 395 ಪರಿಚ್ಛೇದಗಳಿದ್ದವು ಈಗ 448 ಪರಿಚ್ಛೇದಗಳಿವೆ. ಇಲ್ಲಿವರಗೆ 104 ತಿದ್ದುಪಡಿಗಳಾಗಿವೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಉಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ.

ರಾಜ್ಯದಲ್ಲಿ  ಸಿವಿಲ್ ಕಾಮಗಾರಿಗಳಲ್ಲಿ ಕೊಡುವ ಮೀಸಲಾತಿ ಸಂವಿಧಾನದ ಅಡಿಯಲ್ಲೇ ಬರೋದಿಲ್ಲ ಒಟ್ಟು 43% ಅಷ್ಟು ಮೀಸಲಾತಿ ಕೊಟ್ಟಿದ್ದಾರೆ. ಅದರಲ್ಲಿ 4% ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. 400 ಸೀಟನ್ನ ಗೆಲ್ಲಿಸಿದ್ರೆ ದೇಶದ ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎಂದಿದ್ದವರು ಬಿಜೆಪಿಯವರು. ಅನಂತ್ ಕುಮಾರ್, ಅಮಿತ್ ಶಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಹೇಳಿದ್ರು.

ಬಿಜೆಪಿಗು ಸಂವಿಧಾನಕ್ಕೂ ಏನು ಸಂಬಂಧ.

ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತಾಗಿದೆ. ಪಾರ್ಲಿಮೆಂಟ್ ನಲ್ಲಿ ಅಂಬೇಡ್ಕರ್ ಸೋಲಿಸಿದ್ದು ಯಾರು ಎಂದು ಬಿಜೆಪಿ ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ಅಂಬೇಡ್ಕರ್ ನನ್ನ ಸೋಲಿಗೆ ಜನಸಂಘ,ಸಾವರ್ಕರ್ ಎಂದು ಪತ್ರವನ್ನೇ ಬರೆದಿದ್ದಾರೆ. ಅಂಬೇಡ್ಕರ್ ಬರೆದ ಪತ್ರ ಪ್ರದರ್ಶಿಸಿದ ಲಕ್ಷ್ಮಣ್.

ನೀವು ಅಂಬೇಡ್ಕರ್ ಬಗ್ಗೆ,ಸಂವಿಧಾನದ ಬಗ್ಗೆ ಮಾತಾಡುತ್ತೀರಾ.?

ಸಣ್ಣ ವಿಚಾರವನ್ನು ಇಟ್ಟುಕೊಂಡು ಸುಳ್ಳು ಆರೋಪ ಮಾಡುತ್ತ ಸರ್ಕಾರದ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ, ಬಿಜೆಪಿ ನಾಯಕರ ವಿರುದ್ಧ ಲಕ್ಷ್ಮಣ್ ವಾಗ್ದಾಳಿ.

key words: Constitution and BJP, congress, Mysore, Lakshman, KPCC

summary: 

Constitution and BJP: What does Gokulashtami have to do with Imam Sahib?

The post ಸಂವಿಧಾನ ಮತ್ತು ಬಿಜೆಪಿ : ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...