15
July, 2025

A News 365Times Venture

15
Tuesday
July, 2025

A News 365Times Venture

ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರು ದಾಖಲೆ ಸಲ್ಲಿಸಿದರೆ “ ಭೂ ಪರಿಹಾರ “: ಡಾ.ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ಫೆ. 21: ಮಾನವೀಯತೆಯ ದೃಷ್ಟಿಯಿಂದ ಸರ್ಕಾರಿ ಗೋಮಾಳದಲ್ಲಿ ಉಳಿಮೆ ಮಾಡುತ್ತಿದ್ದ ರೈತರ ದಾಖಲೆ ಆಧರಿಸಿ ಸರ್ಕಾರ ಪರಿಹಾರ ನೀಡುತ್ತಿದೆ. ಉಳುಮೆ ಮಾಡುತ್ತಿರುವ  ದಾಖಲೆ ಸಲ್ಲಿಸಿ ಪರಿಹಾರ ಪಡೆಯುವಂತೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲೆಯ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಸರ್ಕಾರಿ ಗೋಮಾಳದಲ್ಲಿ ಸುಮಾರು 150ಕ್ಕೂ ಹೆಚ್ಚು ರೈತ ಕುಟುಂಬದವರು ಉಳಿಮೆ ಮಾಡಿ ಜೀವನ ಸಾಗಿಸುತ್ತಿದ್ದು ಈ ಗೋಮಾಳವನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದವರು ವಶಕ್ಕೆ ಪಡೆದುಕೊಂಡು ರೈತರಿಗೆ ಯಾವುದೇ ಭೂ ಪರಿಹಾರ ನೀಡದೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ಮಾನವೀಯತೆ ದೃಷ್ಟಿಯಿಂದ ಸರ್ಕಾರಿ ಗೋಮಾಳದಲ್ಲಿ ಉಳಿಮೆ ಮಾಡುತ್ತಿದ್ದ ರೈತರ ದಾಖಲೆಗಳನ್ನು ಪಡೆದುಕೊಂಡು ಸರ್ಕಾರ ಪರಿಹಾರ ನೀಡುತ್ತಿದೆ. ಈ ಭೂಮಿಯಲ್ಲಿ ನೀವು ಉಳುಮೆ ಮಾಡುತ್ತಿದ್ದು ನಿಮ್ಮಲ್ಲಿ ದಾಖಲೆಗಳು ಇದ್ದರೆ ಅದನ್ನು ತಾಲೂಕು ತಹಸೀಲ್ದಾರ್  ಅವರಿಗೆ ಸಲ್ಲಿಸಿದರೆ  ನಿಮಗೂ ಕೂಡ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಆಗ, ಈ ಭೂಮಿ ವ್ಯಾಪ್ತಿಯಲ್ಲಿ ಯಾರು ಉಳುಮೆ ಮಾಡದೆ ಇರುವಂತಹ ಬೇರೆ ಬೇರೆ ಗ್ರಾಮಗಳ ಬೇರೆ ಬೇರೆ ಭಾಗದ ರೈತರುಗಳು ಪರಿಹಾರ ಪಡೆದುಕೊಳ್ಳುತ್ತಿದ್ದಾರೆ . ಕೂಡಲೇ ಮುಖ್ಯಮಂತ್ರಿಗಳು ,  ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಲೋಪ ಸರಿಪಡಿಸುವಂತೆ ಸೂಚನೆ ನೀಡಬೇಕು ಎಂದು ರೈತರು ಒತ್ತಾಯ ಮಾಡಿದರು .

key words: ‘Land compensation’, farmers, tilling, gomaala, Dr Yatindra Siddaramaiah

‘Land compensation’ if farmers tilling in government gomaala submit documents: Dr Yatindra Siddaramaiah

The post ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರು ದಾಖಲೆ ಸಲ್ಲಿಸಿದರೆ “ ಭೂ ಪರಿಹಾರ “: ಡಾ.ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...