16
July, 2025

A News 365Times Venture

16
Wednesday
July, 2025

A News 365Times Venture

ಸಾಮೂಹಿಕ ಸೂರ್ಯ ನಮಸ್ಕಾರ: ಶಾಲಾ ವಿದ್ಯಾರ್ಥಿಗಳು ಸೇರಿ ಹಲವರು ಭಾಗಿ

Date:

ಮೈಸೂರು,ಫೆಬ್ರವರಿ,4,2025 (www.justkannada.in): ಇಂದು ರಥಸಪ್ತಮಿ ಅಂಗವಾಗಿ ಮೈಸೂರಿನ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಸೂರ್ಯಯಜ್ಞ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಯೋಗ ಒಕ್ಕೂಟ ವತಿಯಿಂದ ಆಯೋಜಿಸಿದ್ದ  ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಸೂರ್ಯಯಜ್ಞ ಕಾರ್ಯಕ್ರಮದಲ್ಲಿ ಯೋಗಬಂಧುಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಇಲಾಖೆಯವರು ಮತ್ತು ಯೋಗಾಸಕ್ತ ನಾಗರೀಕರು ಪಾಲ್ಗೊಂಡಿದ್ದರು.

ಯೋಗ ಒಕ್ಕೂಟ 2001 ರಲ್ಲಿ ಪ್ರಾರಂಭವಾಗಿ ಅನೇಕ ಯೋಗ ಮತ್ತು ಆರೋಗ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಪ್ರತಿ ವರ್ಷ ರಥಸಪ್ತಮಿ ಅಂಗವಾಗಿ ಸಾಮೂಹಿಕ 108 ಸೂರ್ಯ ನಮಸ್ಕಾರಗಳು ಮತ್ತು ಸೂರ್ಯ ಯಜ್ಞ ಧಾರ್ಮಿಕ ಕಾರ್ಯಕ್ರಮವನ್ನು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸುತ್ತಾ ಬಂದಿದೆ.

ಅಲ್ಲದೆ ಹಲವಾರು ಸಾಮಾಜಿಕ ಸೇವಾ ಕಾರ್ಯಕ್ರಮಗಳಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಯೋಗಚಿತ್ರಕಲಾ ಸ್ಪರ್ಧೆ, ಜನ ಸಾಮಾನ್ಯರಲ್ಲಿ ಆರೋಗ್ಯದ ಅರಿವು ಮೂಡಿಸಲು ಉಚಿತವಾಗಿ ಸರ್ಕಾರಿ ಆಯುರ್ವೇದ ಮತ್ತು ಜೆ.ಎಸ್‌.ಎಸ್‌. ಆಯುರ್ವೇದ ಕಾಲೇಜಿನ ವೈದ್ಯರ ಸಹಕಾರದೊಂದಿಗೆ ಆರೋಗ್ಯ ಸಪ್ತಾಹ ಮತ್ತು ಯೋಗ ಕಾರ್ಯಾಗಾರವನ್ನು ಯೋಗ ಒಕ್ಕೂಟ ಆಗಾಗ ಆಯೋಜಿಸುತ್ತಿದೆ. ಜೊತೆಗೆ ಮೈಸೂರು ಯೋಗ ಸಂಸ್ಥೆಗಳ ಜೊತೆಗೂಡಿ ಪ್ರತಿವರ್ಷ ಜೂನ್ 21 ರಂದು ವಿಶ್ವಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದೆ.

Key words: mysore, Rathasaptami, Surya Namaskar

The post ಸಾಮೂಹಿಕ ಸೂರ್ಯ ನಮಸ್ಕಾರ: ಶಾಲಾ ವಿದ್ಯಾರ್ಥಿಗಳು ಸೇರಿ ಹಲವರು ಭಾಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...

ಎಲ್ಲಾ ಹಾವುಗಳು ವಿಷಕಾರಿಯಲ್ಲ: ಉರಗಗಳ ಬಗ್ಗೆ ಭಯ ಬೇಡ- ಸ್ನೇಕ್ ಶ್ಯಾಮ್

ಮೈಸೂರು,ಜುಲೈ,16,2025 (www.justkannada.in):  `ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ...