19
April, 2026

A News 365Times Venture

19
Sunday
April, 2026

A News 365Times Venture

ಸಾರಿಗೆ ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ- ಆರ್.ಅಶೋಕ್ ವಾಗ್ದಾಳಿ

Date:

ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗೆ ನಮ ಬೆಂಬಲ ಇದೆ. ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಸಾರಿಗೆ ನೌಕರರಿಗೆ ವೇತನ ಕೊಡಲು ಸಾಧ್ಯವಾಗದ ಪಾಪರ್‌ ಹಂತಕ್ಕೆ ಬಂದಿದೆ. ನಮ ಸರ್ಕಾರದ ಖಜಾನೆ ತುಂಬಿದೆ ಎಂದು ಬೊಬ್ಬೆ ಹೊಡೆಯುತ್ತೀರಿ. ನಾನು ಸಾರಿಗೆ ಮಂತ್ರಿಯಾಗಿದ್ದಾಗ ನೌಕರರ ಶೇ.15 ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದೆ. 4 ಲಕ್ಷ ಕೋಟಿಗೂ ಅಧಿಕ ಬಜೆಟ್‌ ಮಂಡನೆ ಮಾಡುವ ನಿಮಗೆ ಅವರ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತಿಲ್ಲವೇ? ಎಂದು  ಕಿಡಿಕಾರಿದರು.

ಇಡೀ ದೇಶವೇ ಕೋವಿಡ್‌ ವೇಳೆ ಆರ್ಥಿಕವಾಗಿ ತತ್ತರಿಸಿತ್ತು. ಅಂತ ಸಂದರ್ಭದಲ್ಲೂ ನಮ ಸರ್ಕಾರ ಸಾರಿಗೆ ನೌಕರರಿಗೆ ಸಂಕಷ್ಟದ ಸಂದರ್ಭದಲ್ಲೂ ಅರ್ಧ ವೇತನವನ್ನು ನೀಡಿತ್ತು. ಎಲ್ಲವೂ ಸರಿಯಾಗಿರುವಾಗ ಬೇಡಿಕೆ ಈಡೇರಿಸಲು ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು.

Key words: problem, transport employees, government, R. Ashok

The post ಸಾರಿಗೆ ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ- ಆರ್.ಅಶೋಕ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...