8
July, 2025

A News 365Times Venture

8
Tuesday
July, 2025

A News 365Times Venture

ಸಿಎಂ ಆಗಿ ಸಿದ್ದರಾಮಯ್ಯ 4.91 ಲಕ್ಷ ಕೋಟಿ ರೂ. ಸಾಲ: ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ- ಆರ್.ಅಶೋಕ್

Date:

ಬೆಂಗಳೂರು, ಮಾರ್ಚ್,13,2025 (www.justkannada.in):  ಸಿದ್ದರಾಮಯ್ಯ ಅವರೊಬ್ಬರೇ ಮುಖ್ಯಮಂತ್ರಿಯಾಗಿ 4.91 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಒಟ್ಟು ಸಾಲದಲ್ಲಿ ಶೇ.63 ರಷ್ಟು ಸಿದ್ದರಾಮಯ್ಯನವರು ಮಾಡಿರುವ ಸಾಲದ ಪಾಲಿದೆ. ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ. ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಸಾಲದ ಕೂಪಕ್ಕೆ ಹೋಗ್ತಾ ಇದ್ದೀವಿ.  ನಾವು ಬಡ್ಡಿ ಕಟ್ಟಲು ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ.  2025 ರಲ್ಲೂ ನಾಡಿನ ಜನರಿಗೆ ಕಾದಿದೆ ಮಾರಿಹಬ್ಬ, ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ ಎಂದು  ಕಿಡಿಕಾರಿದರು.

ರಾಜ್ಯ ಸರ್ಕಾರ ಬಜೆಟ್‌ ನಲ್ಲಿ ಅಭಿವೃದ್ಧಿಯ ಅಂಶಗಳೇ ಇಲ್ಲ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ.  ಆಶಾ ಕಾರ್ಯಕರ್ತರು, ಬಿಸಿಯೂಟ ಮತ್ತು ಅಂಗನವಾಡಿಯ ಸಿಬ್ಬಂದಿಗಳಿಗೆ ಸರಿಯಾಗಿ ಗೌರವ ಧನ ನೀಡುತ್ತಿಲ್ಲ, ಆತಿಥಿ ಉಪನ್ಯಾಸಕರಿಗೆ 6 ತಿಂಗಳಿನಿಂದಲೂ ವೇತನ ಕೊಟ್ಟಿಲ್ಲ. ಚನ್ನಗಿರಿಯ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ, ವಿಷ ಕುಡಿಯುವ ಪರಿಸ್ಥಿತಿ ಬಂದಿದೆ ಎಂದು ಹೇಳುತ್ತಿದ್ದಾರೆ.  ಈ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆರ್ .ಅಶೋಕ್ ಹರಿಹಾಯ್ದರು.

Key words: Siddaramaiah, CM, debt, Tax, Budget, R. Ashok

The post ಸಿಎಂ ಆಗಿ ಸಿದ್ದರಾಮಯ್ಯ 4.91 ಲಕ್ಷ ಕೋಟಿ ರೂ. ಸಾಲ: ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...