13
July, 2025

A News 365Times Venture

13
Sunday
July, 2025

A News 365Times Venture

ಸಿಎಂ ಕುರ್ಚಿ ಗಟ್ಟಿ, ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ- ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಜೂನ್,11,2025 (www.justkannada.in): ನವೆಂಬರ್ ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನಲೆ ದಾಳಿಯಾಗಿರತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ಎಂದು ತಿಳಿಸಿದರು.

ಕಾಲ್ತುಳಿತ ವಿಚಾರ ಕುರಿತು ನಾಳೆ ಬಿಜೆಪಿಯಿಂದ ಪ್ರತಿಭಟನೆ  ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ. ಕಾಲ್ತುಳಿತ ಘಟನೆ ಒಂದು ಹೃದಯವಿದ್ರಾವಕ ಘಟನೆ. ನಿರೀಕ್ಷೆಗಿಂತ ಹೆಚ್ಚಿನ ಜನ ಸೇರಿದ್ದರಿಂದ ದುರಂತ ಆಗಿದೆ. ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು? ನೈತಿಕ ಹೊಣೆ ಅನ್ನೋದು ಮಹತ್ವದ್ದು. ತನಿಖೆ ನಡೆಯುತ್ತಿದೆ ಬಳಿಕ ಯಾರದು ತಪ್ಪು ಏನು ಎಲ್ಲಾ ತಿಳಿಯತ್ತೆ. ಜಾತಿಗಣತಿ ವಿಚಾರ ಕುರಿತು ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯುತ್ತದೆ. ಅಲ್ಲಿ ತೀರ್ಮಾನ ಆಗತ್ತದೆ ಎಂದರು.

ಇನ್ನು ಸಂಪುಟ ಪುನಾರಚನೆ ವಿಚಾರ, ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಹೈ ಕಮಾಂಡ್ ಪುನಾರಚನೆ ಬಗ್ಗೆ ನನ್ನ ಸಲಹೆ ಕೊಡಿ ಅಂತ ಕೇಳಿದರೇ ಕೊಡುತ್ತೇನೆ ಎಂದು ತಿಳಿಸಿದರು.

ಕಳೆದ ವರ್ಷದ ದಸರಾ ಲೆಕ್ಕ ಕೊಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಲೆಕ್ಕ ಕೊಡಿ ಅಂತ ಈಗಾಗಲೇ ಹೇಳಿದ್ದೇನೆ. ಜಿಲ್ಲಾಡಳಿತ ಲೆಕ್ಕ ಕೊಡುತ್ತದೆ. ಅದರಲ್ಲೇನು ಮುಚ್ಚು ಮರೆ ಇಲ್ಲ ಎಂದರು.vtu

Key words: CM, Change, Mysore, Minister, H.C. Mahadevappa

The post ಸಿಎಂ ಕುರ್ಚಿ ಗಟ್ಟಿ, ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...