16
April, 2026

A News 365Times Venture

16
Thursday
April, 2026

A News 365Times Venture

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ

Date:

ಮೈಸೂರು,ಏಪ್ರಿಲ್,7,2026 (www.justkannada.in):  ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು  ಚಾಮುಂಡಿ ಬೆಟ್ಟ ಪ್ರಾಧಿಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದರು.

ಇಂದು ಮಾತನಾಡಿದ ಸಂಸದ ಯದುವೀರ್, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ‌ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು‌ ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು.

ಮೈಸೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಸದ‌ ಯದುವೀರ್, ಮೈಸೂರಿ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹ‌ನ ಸವಾರರಿಗೆ ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್

ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ. ಆದರೆ ಇಲ್ಲಿ ಅಧಿಕಾರಿಗಳ ದರ್ಬಾರು ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಅಧಿಕಾರಿಗಳು ಕಿವಿಕೊಡುತ್ತಿಲ್ಲ. ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ್ ಅಸಮಾಧಾನ ವ್ಯಕ್ತಪಡಿಸಿದರು.

Key words: Officers, No response, public, representatives, Mysore MP, Yaduveer

The post ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...