ಬೆಂಗಳೂರು,ಏಪ್ರಿಲ್,22,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ ಆಗಿದ್ದಾರೆ. ಅವರು ಎಲ್ಲಾ ಸಮುದಾಯಗಳನ್ನೂ ಒಟ್ಟಿಗೆ ಕೊಂಡೊಯ್ಯಬೇಕು. ಎಲ್ಲರಿಗೂ ಸಿಎಂ ಸಿದ್ದರಾಮಯ್ಯ ನ್ಯಾಯ ಒದಗಿಸಬೇಕು. ಹೀಗಾಗಿ ಮೊಟ್ಟ ಮೊದಲ ಕೆಲಸ ಗೊಂದಲಗಳನ್ನ ಪರಿಹರಿಸಲಿ ಎಂದು ಒತ್ತಾಯಿಸಿದರು.
ಸಿಎಂ ಆದಿಯಾಗಿ ಎಲ್ಲ ಸಚಿವರು ಸಾರ್ವಜನಿಕರ ಅನುಮಾನ ಬಗೆಹರಿಸಬೇಕು. ಗ್ರಾಮ ಮಟ್ಟದಲ್ಲಿ ಜಾತಿಗಣತಿ ಅಪ್ ಡೇಟ್ ಮಾಡಲು ಅವಕಾಶ ನೀಡಬೇಕು. ಕುರುಬರನ್ನು ಹೆಚ್ಚಿನ ಸಂಖ್ಯೆಯಲ್ಲಿ ತೋರಿಸಿದ್ದಾರೆಂಬ ಅನುಮಾನ ಕೆಲವರಿಗಿದೆ. ಆ ಅನುಮಾನವನ್ನ ಸಿದ್ದರಾಮಯ್ಯನವರೇ ಬಗೆಹರಿಸಬೇಕು. ಗೊಂದಲ ಬಗೆಹರಿಸುವುದು ಸರ್ಕಾರದ ಮೊಟ್ಟ ಮೊದಲ ಕೆಲಸ ಎಂದು ಡಿ.ಕೆ ಸುರೇಶ್ ತಿಳಿಸಿದರು.
Key words: CM Siddaramaiah, confusion, caste census, D.K. Suresh
The post ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ಇರುವ ಗೊಂದಲ ನಿವಾರಿಸಲಿ- ಡಿ.ಕೆ ಸುರೇಶ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.