22
April, 2026

A News 365Times Venture

22
Wednesday
April, 2026

A News 365Times Venture

ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ: ನಾಳೆ ಪೌರಕಾರ್ಮಿಕರಿಂದ ಸಹಪಂಕ್ತಿ ಭೋಜನ

Date:

ಮೈಸೂರು,ಆಗಸ್ಟ್,11,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಾಳೆ ಪೌರಕಾರ್ಮಿಕರಿಂದ ಸ್ಥಳದಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ  ಭೋಜನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ತಿಳಿಸಿದರು.

ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕೆ.ಶಿವರಾಮು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೃದಿಕೆ ವತಿಯಿಂದ ಪೌರ ಸೇನಾನಿಗಳು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸಾಹಿತಿಗಳು, ಚಿಂತಕರೊಂದಿಗೆ ಸಹಪಂಕ್ತಿ ಭೋಜನ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿದೆ.  ನಗರದ ಬಲ್ಲಾಳ್ ವೃತ್ತದ ಬಳಿ ಇರುವ ಬುದ್ದ ವಿಹಾರದ ಆವರಣದಲ್ಲಿ ಸಹಪಂಕ್ತಿ ಬೋಜನ ನಡೆಯಲಿದೆ. ಕಾರ್ಯಕ್ರಮಕ್ಕೆ ಹಲವಾರು ಪ್ರಗತಿಪರ ಚಿಂತಕರು, ಸಾಹಿತಿಗಳು ಸೇರಿದಂತೆ ಹಲವಾರು ಮುಖಂಡರು ಪಕ್ಷಾತೀತ, ಜಾತ್ಯಾತೀತ ಪಾಲ್ಗೊಳ್ಳಲಿದ್ದಾರೆ ಎಂದರು.

ಸಿದ್ದರಾಮಯ್ಯನವರ ಜಾತ್ಯತೀತ ಸೈದ್ಧಾಂತಿಕ ನಿಲುವುಗಳು ನಮಗೆ ಪ್ರೇರಣೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯ ಹುಟ್ಟು ಹಬ್ಬವನ್ನ ಅರ್ಥಗರ್ಭಿತವಾಗಿ ಆಚರಿಸಲಾಗುತ್ತದೆ ಎಂದು ಕೆ.ಶಿವರಾಮು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪ್ಪಾರ ಸಮುದಾಯದ ಜಿಲ್ಲಾ ಅಧ್ಯಕ್ಷ ಯೋಗೇಶ್, ಪೌರ ಕಾರ್ಮಿಕರ ಸಂಘದ ಮುಖಂಡ ಮಾರ ಸೇರಿದಂತೆ ಹಲವರು ಭಾಗಿಯಾಗಿದ್ದರು.

Key words: CM, Siddaramaiah,  birthday, joint dinner,  civic workers, Mysore

The post ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ: ನಾಳೆ ಪೌರಕಾರ್ಮಿಕರಿಂದ ಸಹಪಂಕ್ತಿ ಭೋಜನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...