30
May, 2026

A News 365Times Venture

30
Saturday
May, 2026

A News 365Times Venture

ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Date:

ಮೈಸೂರು,ಮಾರ್ಚ್,15,2025 (www.justkannada.in): ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ(ಸ್ವಾಯತ್ತ) ನಡೆದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಇಂದು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಒಟ್ಟು 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 406 ಪದವೀಧರರು ಮತ್ತು 183 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಇವರಲ್ಲಿ 45 ಪ್ರತಿಭಾವಂತ ವಿದ್ಯಾರ್ಥಿಗಳು, 34 ಪದವೀಧರರು ಮತ್ತು 11 ಸ್ನಾತಕೋತ್ತರ ವಿದ್ಯಾರ್ಥಿಗಳು, ಶ್ರೇಷ್ಠ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕಗಳನ್ನು ಸ್ವೀಕರಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ  ಡಾ. ಬರ್ನಾಡ್ ಮೊರಾಸ್ ಆಗಮಿಸಿದ್ದರು.   ಚಂಡೀಗಢ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಮನ್‌ಪ್ರೀತ್ ಸಿಂಗ್ ಮನ್ನಾ ಪದವಿ ಪ್ರದಾನ ಭಾಷಣ ಮಾಡಿದರು.

ಹಾಗೆಯೇ  ಅತಿಥಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ  ಪ್ರೊ. ಎನ್.ಕೆ. ಲೋಕನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಆಡ್ ಜಾನ್ ಮೆಂಡೋನ್ಸಾ ಧರ್ಮಪ್ರಾಂತ್ಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಫಾದರ್ ಎಡ್ವರ್ಡ್ ವಿಲಿಯಮ್ ಸಾಲ್ಡಾನ್ಹಾ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ಗುರುಗಳಾದ ಡಾ. ಲೂರ್ದ್ ಪ್ರಸಾದ್, ರೆಕ್ಟರ್, ಜ್ಞಾನ ಪ್ರಗಾಸಂ,  ಡೇವಿಡ್ ಸಾಗಯರಾಜ್ ಎಸ್ ಮತ್ತಿತರರು ಉಪಸ್ಥಿತರಿದ್ದರು.

Key words: St. Philomena’s College, 11th Convocation

The post ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ...