15
May, 2026

A News 365Times Venture

15
Friday
May, 2026

A News 365Times Venture

ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್ ಒಂದೇ ಕುಟುಂಬದ 6 ಮಂದಿ ಸಾವು

Date:

ಕೊಪ್ಪಳ, ಮೇ,15,2026 (www.justkannada.in):  ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿಬಿದ್ದು ಒಂದೇ ಕುಟುಂಬದ 6 ಮಂದಿ ಅಸುನೀಗಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ನಡೆದಿದೆ.

ಮುನಿರಾಬಾದ್  ಸಮೀಪದ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿ ಈ ದುರಂತ ಸಂಭವಿಸಿದೆ.  ಭೀಕರ ರಸ್ತೆ ಅಪಘಾತದಲ್ಲಿ  ಒಂದು ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಲಿಗೆಮ್ಮ ದೇವಸ್ಥಾನಕ್ಕೆ ದೇವರ ಕಾರ್ಯಕ್ಕಾಗಿ ಕುಟುಂಬಸ್ಥರು ಟ್ರ್ಯಾಕ್ಟರ್‌ ನಲ್ಲಿ ಪ್ರಯಾಣಿಸುತ್ತಿದ್ದರು. ಈ  ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ  ಎನ್ನಲಾಗಿದೆ.

ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ತುರ್ತುವಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ.

Key words: tractor, falls off, bridge, Six  people, death

The post ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್ ಒಂದೇ ಕುಟುಂಬದ 6 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಾವಲು ವಾಹನ ಕಡಿಮೆ ಮಾಡಿದ ವಿಚಾರ: ಇವೆಲ್ಲ ನಾಟಕೀಯ ಎಂದ ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ,15,2026 (www.justkannada.in): ಇಂಧನ ಮಿತ ಬಳಕೆಗೆ  ಪ್ರಧಾನಿ ಮೋದಿ ಕರೆ ನೀಡಿದ...

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,15,2026 (www.justkannada.in): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು...

SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದೆ 13 ಕೋಟಿ ಜನರ...

ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ

 ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ...