3
March, 2026

A News 365Times Venture

3
Tuesday
March, 2026

A News 365Times Venture

ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು – ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ

Date:

ಮೈಸೂರು ಏಪ್ರಿಲ್ 02,2025 (www.justkannada.in):  ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ ಅವರು ತಿಳಿಸಿದರು.

ಇಂದು ನಗರ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಪುಟ್ಟಮಾದಯ್ಯ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಏಕೀಕರಣದ ನಂತರ ಮೈಸೂರು ರಾಜ್ಯದಲ್ಲಿ ಪೊಲೀಸ್ ಧ್ವಜ ವಿಭಿನ್ನವಾಗಿದ್ದವು. ಅದನ್ನು ಮಾರ್ಪಡಿಸಿ 1960 ರಲ್ಲಿ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೊಳಿಸಿ ನಿವೃತ್ತ ಪೊಲೀಸರ ಕಲ್ಯಾಣ ನಿಧಿ ಜಾರಿಗೊಳಿಸಲಾಯಿತು ಎಂದರು.

ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ಧಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು. ಆರೋಗ್ಯ ಸಮಸ್ಯೆಗಳೂ ಬೇಗ ಬರುತ್ತವೆ. ಹೀಗಾಗಿ ಆರೋಗ್ಯದ  ಬಗ್ಗೆ ಕಾಳಜಿ ಅಗತ್ಯ. ಸಾರ್ವಜನಿಕ ಜೀವನದಲ್ಲಿ ನಡೆದುಕೊಳ್ಳುವ ರೀತಿ ಮುಖ್ಯ. ಈ ದಿನಗಳಲ್ಲಿ ರಾಜಕೀಯ ಗೊಂದಲ, ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು. ನಿವೃತ್ತ ಅಧಿಕಾರಿಗಳ ಪಟ್ಟಿ ಠಾಣಾ ಮಟ್ಟದಲ್ಲಿ ನಿರ್ವಹಣೆ ಆಗಬೇಕು. ನಿವೃತ್ತರನ್ನು ಗೌರವಿಸಬೇಕು ಎಂದು ತಿಳಿಸಿದರು.

ಪ್ರಧಾನ ದಳಪತಿ ಸಹಾಯಕ ಕಮಾಂಡರ್ ರಾಜು.ಎಂ ತುಕಡಿಗಳ ಪರಿವೀಕ್ಷಣೆಗೆ ಕರೆದೊಯ್ದರು. ತೆರೆದ ವಾಹನದಲ್ಲಿ  ಪರಿವೀಕ್ಷಣೆ ಮಾಡಲಾಯಿತು. ನಗರ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಗರ ನಾಗರಿಕ ಪೊಲೀಸ್, ಸಂಚಾರ ವಿಭಾಗ, ಅಶ್ವರೋಹಿ ದಳದಿಂದ 10 ತಂಡಗಳಿಂದ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಡಿಸಿಪಿ ಮುತ್ತುರಾಜ್, ಎಸ್.ಜಾಹ್ನವಿ, ಎಡಿಎಸ್ಪಿ ನಾಗೇಶ್, ಕಮಾಂಡೆಂಟ್ ಶೈಲೇಂದ್ರ,  ಕೆಪಿಎ ನಿರ್ದೇಶಕ ಚನ್ನಬಸವಣ್ಣ, ಸೆಸ್ಕಾಂ ನ ಎಎಸ್ಪಿ  ಸವಿತಾ ಹೂಗಾರ್  ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Key words: Young officers, strength, Handle, cyber crimes, Putta Madaiah

The post ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು – ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ...

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...