4
May, 2026

A News 365Times Venture

4
Monday
May, 2026

A News 365Times Venture

ಹನಿಟ್ರ್ಯಾಪ್ ಚರ್ಚೆ: 48 ಜನರ ಪೆನ್ ಡ್ರೈವ್ ಮಾಡಿಕೊಂಡಿದ್ದಾರೆ ಎಂದ ಸಚಿವ ರಾಜಣ್ಣ: ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರ ಆದೇಶ

Date:

ಬೆಂಗಳೂರು,ಮಾರ್ಚ್,20,2025 (www.justkannada.in): ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್​ (ಬಲೆಗೆ ಬೀಳಿಸುವ ಯತ್ನ ನಡೆದಿದೆ ಎನ್ನುವ ಸುದ್ದಿ ಭಾರೀ ಸದ್ದು ಮಾಡಿದ್ದು,  ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಭಾರಿ ಚರ್ಚೆಯಾಗಿದೆ.

ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ, ನನಗಿರೋ ಮಾಹಿತಿಯಂತೆ ಒಬ್ಬರು, ಇಬ್ಬರೂ ಇಲ್ಲ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರಮಟ್ಟದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದರಲ್ಲಿ ಸಿಲುಕಿದ್ದಾರೆ. 48 ಜನ ಈ ಸಿಡಿನಲ್ಲಿ ಇದ್ದಾರೆ ಎಂದರು.

48 ಜನರ ಪೆನ್ ಡ್ರೈವ್ ಮಾಡಿಕೊಂಡಿದ್ದಾರೆ.  ಕರ್ನಾಟಕ ಸಿಡಿ ಪೆನ್ ಡ್ರೈವ್ ಕಾರ್ಖಾನೆಯಾಗಿದೆ. ರಾಜ್ಯಕ್ಕೆ ಮಾತ್ರವಲ್ಲದೆ ರಾಷ್ಟ್ರಮಟ್ಟದವರೆಗೂ ಇದು ಹಬ್ಬಿದೆ. ನಾನು ಗೃಹ ಸಚಿವರಿಗೆ ಲಿಖಿತ ದೂರು ಕೊಡಿತ್ತೇನೆ.  ಇದರ ಹಿಂದೆ ಯಾರೇ ಇದ್ದರೂ ಹೊರಬರಬೇಕು. ಇದರ ಹಿಂದಿರುವ ನಿರ್ದೇಶಕರು ಯಾರೆಂದು ತಿಳಿಯಲಿ ಎಂದು ಒತ್ತಾಯಿಸಿದರು.

ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ -ಗೃಹ ಸಚಿವ ಪರಮೇಶ್ವರ್

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಾಜಣ್ಣ ಅವರು ಲಿಖಿತ ದೂರು ನೀಡುವುದಾಗಿ ಹೇಳಿದ್ದಾರೆ. ಲಿಖಿತ ದೂರು ನೀಡಿದರೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ನನ್ನ ಮೇಲಿನ ಪ್ರಕರಣ ಏನು ಮಾಡುತ್ತೀರಿ ಎಂದು ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಗೃಹ ಸಚಿವ ಪರಮೇಶ್ವರ್​ ಅವರನ್ನು ಪ್ರಶ್ನಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್, ನೀವು ಲಿಖಿತವಾಗಿ ದೂರು ಕೊಡಿ ಎಂದು ಸಲಹೆ ನೀಡಿದರು.

Key words: Honeytrap, Discussion, session, Minister, KN Rajanna

The post ಹನಿಟ್ರ್ಯಾಪ್ ಚರ್ಚೆ: 48 ಜನರ ಪೆನ್ ಡ್ರೈವ್ ಮಾಡಿಕೊಂಡಿದ್ದಾರೆ ಎಂದ ಸಚಿವ ರಾಜಣ್ಣ: ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...