30
July, 2025

A News 365Times Venture

30
Wednesday
July, 2025

A News 365Times Venture

ಹಳಿ ತಪ್ಪಿದ ಗೂಡ್ಸ್ ರೈಲು:  ರೈಲು ಸಂಚಾರದಲ್ಲಿ ವ್ಯತ್ಯಯ

Date:

ಬೆಳಗಾವಿ,ಏಪ್ರಿಲ್,15,2025 (www.justkannada.in): ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ‌ ತಪ್ಪಿ ಉರುಳಿಬಿದ್ದ ಘಟನೆ  ಇಂದು ಬೆಳಗಾವಿಯಲ್ಲಿ ನಡೆದಿದೆ.

ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ‌ ಎರಡು ಬೋಗಿಗಳು  ಬೆಳಗಾವಿ ರೈಲು ನಿಲ್ದಾಣದ ಅರ್ಧ ಕಿ.ಮೀ ದೂರದಲ್ಲಿ ಹಳಿ‌ ತಪ್ಪಿದೆ. ಗೂಡ್ಸ್ ರೈಲು ಜಿಂದಾಲ್‌ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಕಡೆಗೆ ಹೊರಟಿತ್ತು ಎನ್ನಲಾಗಿದೆ.

ಒಂದು ಹಳಿಯಿಂದ ಇನ್ನೊಂದು ಹಳಿಗೆ ರೈಲನ್ನು ಬದಲಾಯಿಸುವ ಸಂದರ್ಭದಲ್ಲಿ ಈ ವ್ಯತ್ಯಾಸವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ರೈಲು ಸಂಚಾರದಲ್ಲಿಯೂ ಅಡಚಣೆ ಉಂಟಾಗಿದೆ. ಸುಮಾರು 4 ತಾಸು ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ – ಮಿರಜ್ ಮಾರ್ಗದಲ್ಲಿ ಎಲ್ಲ ರೈಲುಗಳು ಸಂಚಾರ ಸ್ಥಗಿತಗೊಂಡಿದ್ದು , ದುರಸ್ತಿ ಕಾರ್ಯ ಮುಗಿದ ಬಳಿಕ ಆರಂಭಗೊಳ್ಳಲಿವೆ. ಬೆಳಗಾವಿಯಿಂದ ಹೊರಟಿದ್ದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್, ಬೆಂಗಳೂರು ಜೋದ್ಪುರ್ ಎಕ್ಸ್‌ಪ್ರೆಸ್, ಬೆಂಗಳೂರಿಂದ ಭಗತ್ ಕೋಟಿ, ಕ್ಯಾಸಲ್ ರಾಕ್- ಮಿರಜ್ ಪ್ಯಾಸೆಂಜರ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Key words: Goods train,  derails, Belgaum

The post ಹಳಿ ತಪ್ಪಿದ ಗೂಡ್ಸ್ ರೈಲು:  ರೈಲು ಸಂಚಾರದಲ್ಲಿ ವ್ಯತ್ಯಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...