13
May, 2026

A News 365Times Venture

13
Wednesday
May, 2026

A News 365Times Venture

ಹಳಿ ತಪ್ಪಿದ ಗೂಡ್ಸ್ ರೈಲು:  ರೈಲು ಸಂಚಾರದಲ್ಲಿ ವ್ಯತ್ಯಯ

Date:

ಬೆಳಗಾವಿ,ಏಪ್ರಿಲ್,15,2025 (www.justkannada.in): ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ‌ ತಪ್ಪಿ ಉರುಳಿಬಿದ್ದ ಘಟನೆ  ಇಂದು ಬೆಳಗಾವಿಯಲ್ಲಿ ನಡೆದಿದೆ.

ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ‌ ಎರಡು ಬೋಗಿಗಳು  ಬೆಳಗಾವಿ ರೈಲು ನಿಲ್ದಾಣದ ಅರ್ಧ ಕಿ.ಮೀ ದೂರದಲ್ಲಿ ಹಳಿ‌ ತಪ್ಪಿದೆ. ಗೂಡ್ಸ್ ರೈಲು ಜಿಂದಾಲ್‌ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಕಡೆಗೆ ಹೊರಟಿತ್ತು ಎನ್ನಲಾಗಿದೆ.

ಒಂದು ಹಳಿಯಿಂದ ಇನ್ನೊಂದು ಹಳಿಗೆ ರೈಲನ್ನು ಬದಲಾಯಿಸುವ ಸಂದರ್ಭದಲ್ಲಿ ಈ ವ್ಯತ್ಯಾಸವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ರೈಲು ಸಂಚಾರದಲ್ಲಿಯೂ ಅಡಚಣೆ ಉಂಟಾಗಿದೆ. ಸುಮಾರು 4 ತಾಸು ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ – ಮಿರಜ್ ಮಾರ್ಗದಲ್ಲಿ ಎಲ್ಲ ರೈಲುಗಳು ಸಂಚಾರ ಸ್ಥಗಿತಗೊಂಡಿದ್ದು , ದುರಸ್ತಿ ಕಾರ್ಯ ಮುಗಿದ ಬಳಿಕ ಆರಂಭಗೊಳ್ಳಲಿವೆ. ಬೆಳಗಾವಿಯಿಂದ ಹೊರಟಿದ್ದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್, ಬೆಂಗಳೂರು ಜೋದ್ಪುರ್ ಎಕ್ಸ್‌ಪ್ರೆಸ್, ಬೆಂಗಳೂರಿಂದ ಭಗತ್ ಕೋಟಿ, ಕ್ಯಾಸಲ್ ರಾಕ್- ಮಿರಜ್ ಪ್ಯಾಸೆಂಜರ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Key words: Goods train,  derails, Belgaum

The post ಹಳಿ ತಪ್ಪಿದ ಗೂಡ್ಸ್ ರೈಲು:  ರೈಲು ಸಂಚಾರದಲ್ಲಿ ವ್ಯತ್ಯಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ...