16
May, 2026

A News 365Times Venture

16
Saturday
May, 2026

A News 365Times Venture

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

Date:

ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಮೇಲೆಯೇ ಈ ದೌರ್ಜನ್ಯವೆಸಗಲಾಗಿದೆ.

15 ದಿನಗಳ ಹಿಂದಷ್ಟೇ ಮಹಿಳೆ ಜುಡಿಷಿಯಲ್ ಲೇಔಟ್​ ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಆಗಮಿಸಿದ್ದರು.

ಈ ವೇಳೆ ಏಕಾಏಕಿ ಬಂದ ದರೋಡೆಕೋರ ಚಾಕು ಸಮೇತ  ಪಿಜಿಗೆ ನುಗ್ಗಿ ಮಹಿಳೆಯಿದ್ದ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.  ಈ ವೇಳೆ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Key words: Female officer, sexually, assault, Robber

The post ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’

 ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ...

ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  

ಉಡುಪಿ,ಮೇ,16,2026 (www.justkannada.in):   ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು 6 ತಿಂಗಳ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ...

ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

 ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು...