25
August, 2026

A News 365Times Venture

25
Tuesday
August, 2026

A News 365Times Venture

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

Date:

ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಮೇಲೆಯೇ ಈ ದೌರ್ಜನ್ಯವೆಸಗಲಾಗಿದೆ.

15 ದಿನಗಳ ಹಿಂದಷ್ಟೇ ಮಹಿಳೆ ಜುಡಿಷಿಯಲ್ ಲೇಔಟ್​ ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಆಗಮಿಸಿದ್ದರು.

ಈ ವೇಳೆ ಏಕಾಏಕಿ ಬಂದ ದರೋಡೆಕೋರ ಚಾಕು ಸಮೇತ  ಪಿಜಿಗೆ ನುಗ್ಗಿ ಮಹಿಳೆಯಿದ್ದ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.  ಈ ವೇಳೆ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Key words: Female officer, sexually, assault, Robber

The post ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...