27
July, 2026

A News 365Times Venture

27
Monday
July, 2026

A News 365Times Venture

ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ

Date:

ಮೈಸೂರು,ಜುಲೈ,23,2025 (www.justkannada.in): ನ್ಯಾಯಾಲಯದಲ್ಲಿ ವ್ಯಾಜ್ಯ ಮುಗಿಯುವವರೆಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಮನವಿ ಮಾಡಿದ್ದಾರೆ.

ಈ ಕುರಿತು ಸಚಿವ ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ದಿನಾಂಕ:-2/8/2025 ರಂದು ಮುಗಿಯಲ್ಲಿದೆ.  ಏಕ ಕಾಲದಲ್ಲಿ ಸರಿ ಸುಮಾರು 10500 ಅತಿಥಿ ಉಪನ್ಯಾಸಕರು ಕರ್ತವ್ಯದಿಂದ ಬಿಡುಗಡೆ ಹೊಂದಲಿದ್ದಾರೆ. ಇದರಿಂದ ಕಾಲೇಜಿನಲ್ಲಿ ಪಾಠಪ್ರವಚನಕ್ಕೆ ತೊಂದರೆಯಾಗಲಿದ್ದು, ಅಲ್ಲದೆ ಸ್ಥಾನಕ್ಕೆ ಪರ್ಯಾಯವಾಗಿ ನೇಮಿಸಿಕೊಳ್ಳಲು ನ್ಯಾಯಾಲಯದಲ್ಲಿ ವ್ಯಾಜ್ಯವಿರುವುದರಿಂದ ಯಾವುದೇ ನೇಮಕಾತಿಯ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.

ಈ ಕಾರಣದಿಂದಾಗಿ ಇಲಾಖೆಯು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದರಿಂದ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ 2 ತಿಂಗಳಿಗೆ ಪರೀಕ್ಷೆ ಬರುವುದರಿಂದ. ವಿದ್ಯಾರ್ಥಿಗಳ & ಶೈಕ್ಷಣಿಕ ಹಿತದೃಷ್ಟಿಯಿಂದ ವ್ಯಾಜ್ಯವು ಇತ್ಯರ್ಥ ಆಗುವವರೆಗೂ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗಳನ್ನು ಸೇವೆಯಲ್ಲಿ ಮುಂದುವರೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.vtu

Key words: Continue, guest lecturers, service, MLC,  K.Vivekananda

 

The post ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ

ನವದೆಹಲಿ,ಜುಲೈ,25,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ...

ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ

ನವದೆಹಲಿ,ಜುಲೈ,25,2026 (www.justkannada.in):  ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ...

ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು...