23
January, 2026

A News 365Times Venture

23
Friday
January, 2026

A News 365Times Venture

ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ

Date:

ಬೆಂಗಳೂರು,ಏಪ್ರಿಲ್,28,2025 (www.justkannada.in): ತನ್ನ ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯ ಮಾಲೀಕನ ಪತ್ನಿಯನ್ನ ಮದುವೆಯಾಗಿದ್ದ ವ್ಯಕ್ತಿಯನ್ನ ನಾಲ್ಕೈದು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಲೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿಲೀಪ್ ಹತ್ಯೆಯಾದ ವ್ಯಕ್ತಿ. ದಿಲೀಪ್  ಬೆಂಗಳೂರಿನ ದಾಬಸ್ ಪೇಟೆಯಲ್ಲಿ ಕಾರ್ಗೋ ನಡೆಸುತ್ತಿದ್ದನು. ಈ ಮಧ್ಯೆ ದಿಲೀಪ್  ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯಲ್ಲಿ ವಾಸವಿದ್ದ. ಸೋಲೂರಿನ ಬಾಡಿಗೆಮನೆಯಲ್ಲಿ ವಾಸವಿದ್ದ ದಿಲೀಪ್  ಮನೆ ಮಾಲೀಕನ ಪತ್ನಿ ಅಮೃತ ಎಂಬುವವರನ್ನ ಪರಿಚಯ ಮಾಡಿಕೊಂಡಿದ್ದ. ಈ ಮಧ್ಯೆ 5 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು  ಅಮೃತ ದೀಲಿಪ್ ಮದುವೆಯಾಗಿದ್ದು , ಒಟ್ಟಾಗಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.  ಇದು ಅಮೃತಾ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ಮಧ್ಯೆ  ನಿನ್ನೆ ನೆಲಮಂಗಲದಲ್ಲಿ ಅಮೃತಾ ಮತ್ತು ದಿಲೀಪ್ ಸ್ನ್ಯಾಕ್ಸ್ ತಿನ್ನಲು ಬಂದಿದ್ದರು. ಈ ವೇಳೆ  ಐದಾರು ಜನರ ಗುಂಪು ದಿಲೀಪ್ ಮೇಲೆ ಮಚ್ಚನಿಂದ ಹಲ್ಲೆ ಮಾಡಿ ನಂತರ ಕಿಡ್ನಾಪ್ ಮಾಡಿದ್ದರು. ಇದೀಗ ತುಮಕೂರಿನಲ್ಲಿ ದಿಲೀಪ್   ಶವ ಪತ್ತೆಯಾಗಿದ್ದು, ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Man, kidnapped, murdered, Bangalore

The post ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...