22
April, 2026

A News 365Times Venture

22
Wednesday
April, 2026

A News 365Times Venture

ಹೇಡಿ ಎಂಬ ಹೇಳಿಕೆ: ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರಧಾನಿ ಮೋದಿ ಬಳಿ ಕ್ಷಮೆ ಕೇಳಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ

Date:

ಬೆಂಗಳೂರು,ಫೆಬ್ರವರಿ,10,2026 (www.justkannada.in):  ಪ್ರಧಾನಿ ಮೋದಿ ಹೇಡಿ ಎಂಬ ಹೇಳಿಕೆ ವಿಚಾರ ಸಿಎಂ ಸಿದ್ದರಾಮಯ್ಯ ತಕ್ಷಣವೇ ದೇಶದ ಮತ್ತು ಪ್ರಧಾನಿ ನರೇಂದ್ರ ಮೋದಿ ಬಳಿ ಕ್ಷಮೆ ಕೇಳಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ,  ಸಿಎಂ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಹೀಗೆ ಮಾತಾಡಿದ್ದಾರಾ ಅಥವಾ ರಾಹುಲ್ ಗಂಧಿ ಓಲೈಸಲು ಹೀಗೆ ಮಾತಾಡಿದ್ದಾರಾ? ಅಥವಾ ತಲೆಕೆಟ್ಟು ಸಿಎಂ ಸಿದ್ದರಾಮಯ್ಯ ಹೀಗೆ ಮಾತಾಡಿದ್ದಾರಾ?  ಸಿಎಂಗೆ ಪರೀಕ್ಷೆ ಮಾಡಿಸುವ ಅಗತ್ಯವಿದೆ. ಸಿಎಂ ತಕ್ಷಣ ದೇಶದ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ನಾಯಕರು ಇತ್ತೀಚೆಗೆ  ನಾಲಿಗೆಯ ಬೆಲೆ ಗೌರವ ಕಳೆಯುತ್ತಿದ್ದಾರೆ.  ಇಂಥ ನಾಲಿಗೆಗೆ ಗೌರವವಿಲ್ಲ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಹೇಡಿ ಎಂಬ ಕೆಟ್ಟ ಪದ ಬಳಸಿದ್ದಾರೆ. ಇಷ್ಟೊಂದು ಕೆಟ್ಟಪದಗಳಿಂದ ನಿಂದಿಸಿರುವುದು ವಿಪರ್ಯಾಸ.  ಪ್ರಿಯಾಂಕ್ ಖರ್ಗೆ ಕೂಡ ಹಾಗೆಯೇ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇವರನ್ನು ಮೋದಿ ಅಭಿಮಾನಿಗಳು ಕುನ್ನಿಗೆ ಹೋಲಿಸಿದ್ದಾರೆ.  ನಾನು ಹಾಗೆ ಹೇಳಲ್ಲ.  ನಾನು ಇವರಿಗೆ ಕುನ್ನಿ ಎಂಬ ಪದ ಬಳಸಲ್ಲ. ವ್ಯವಸ್ಥೆಯಲ್ಲಿ  ಒಬ್ಬರಿಗೊಬ್ಬರು ಗೌರವಿಸಬೇಕು ಸಿಎಂ ಸಿದ್ದರಾಮಯ್ಯ ಪ್ರಿಯಾಂಕ್ ಖರ್ಗೆ ಇಬ್ಬರು ಕುನ್ನಿಗಳು ಅಂತಾ ನಾನು ದೇವನಹಳ್ಳಿಗೆ ಹೋದಾಗ ಅಲ್ಲಿದ್ದ ಯುವಕರು ಹೇಳುತ್ತಿದ್ದರು ಮೋದಿ ಹೇಡಿ ಎಂದಿರುವ ಈ ಕುನ್ನಿಗಳಿಗೆ ಯಾರು ಹೆದರಿಕೊಳ್ಳಬೇಕು ಎನ್ನುತ್ತಿದ್ದರು ಎಂದು ಹೇಳಿದರು.

ಸರ್ಕಾರಿ ಖಜಾನೆ ಖಾಲಿ: 2.8 ಲಕ್ಷ ಹುದ್ದೆಗಳು ಖಾಲಿ ಇದ್ರೂ ಎರಡುವರೆ ವರ್ಷದಿಂದ ನೇಮಕಾತಿ ಇಲ್ಲ

ಇದೇ ವೇಳೆ ಎರಡುವರೆ ವರ್ಷದಿಂದ ಸರಿಯಾಗಿ ನೇಮಕಾತಿಗಳನ್ನ ಮಾಡದೇ ಕುಂಟುನೆಪ ಹೇಳುತ್ತಿರುವ ಸರ್ಕಾರದ ವಿರುದ್ದ ಕಿಡಿಕಾರಿದ ಛಲವಾದಿ ನಾರಾಯಣಸ್ವಾಮಿ, ಎರಡುವರೆ ವರ್ಷದಿಂದ ಬ್ಯಾಕ್ ಲಾಗ್ ಹುದ್ದೆ ಭರ್ತಿ ಇಲ್ಲ. ರಾಜ್ಯದಲ್ಲಿ  2.8 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ.  ಒಳ ಮೀಸಲಾತಿ ಜಾರಿ ಆಗಲಿಲ್ಲ. ಈ  ಸಂಬಂಧ ವಿಧೇಯಕ ರಾಜ್ಯಪಾಲರ  ಬಳಿ ಇದೆ ಸರ್ಕಾರ ಖಜಾನೆ ಖಾಲಿಯಾಗಿದೆ  ನೇಮಕಾತಿಗಳು ನಡೆಯುತ್ತಿಲ್ಲ ಎಂದು ಗುಡುಗಿದರು.

Key words:  statement, CM Siddaramaiah, PM Modi, Chalavadi Narayanaswamy

The post ಹೇಡಿ ಎಂಬ ಹೇಳಿಕೆ: ಸಿಎಂ ಸಿದ್ದರಾಮಯ್ಯ ತಕ್ಷಣವೇ ಪ್ರಧಾನಿ ಮೋದಿ ಬಳಿ ಕ್ಷಮೆ ಕೇಳಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...